HEALTH TIPS

'ಈರುಳ್ಳಿಗೂ ಸಬ್ಸಿಡಿ': ಪ್ರತೀ ಕೆಜಿಗೆ 35ರೂ.ನಂತೆ ಮಾರಾಟ: ಕೇಂದ್ರ ಸರ್ಕಾರ

     ನವದೆಹಲಿ: ದಿನೇ ದಿನೇ ಗಗನಕ್ಕೇರುತ್ತಿರುವ ಈರುಳ್ಳಿ ದರ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಕೇಂದ್ರ ಸರ್ಕಾರ ಇದೀಗ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ನಿರ್ಧರಿಸಿದ್ದು, ಗುರುವಾರ ಅಂದರೆ ನಾಳೆಯಿಂದಲೇ ಪ್ರತೀ ಕೆಜಿಗೆ 35ರೂ ದರದಲ್ಲಿ ಮಾರಾಟ ಮಾಡಲು ಸಿದ್ಧತೆ ನಡೆಸಿದೆ.

    ಹೌದು.. ಹೆಚ್ಚುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರವು ಗುರುವಾರದಿಂದ ದೆಹಲಿ-ಎನ್‌ಸಿಆರ್‌ ವ್ಯಾಪ್ತಿಯಲ್ಲಿ ಮೊಬೈಲ್ ವ್ಯಾನ್‌ಗಳು ಮತ್ತು ಎನ್‌ಸಿಸಿಎಫ್ ಚಿಲ್ಲರೆ ಅಂಗಡಿಗಳ ಮೂಲಕ ಪ್ರತಿ ಕೆಜಿಗೆ 35 ರೂಪಾಯಿಗಳ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಾರಾಟವನ್ನು ಪ್ರಾರಂಭಿಸಲಿದೆ.

     ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈರುಳ್ಳಿ ಚಿಲ್ಲರೆ ಮಾರಾಟವನ್ನು ಕೃಷಿ ಭವನದಲ್ಲಿ ಪ್ರಾರಂಭಿಸಲಿದ್ದಾರೆ ಎಂದು ಇಲಾಖೆ ಅಧಿಕೃತ ಹೇಳಿಕೆ ತಿಳಿಸಿದೆ.

ಎಲ್ಲೆಲ್ಲಿ ಸಬ್ಸಿಡಿ ದರ?

     ಕೃಷಿ ಭವನ, ಎನ್‌ಸಿಯುಐ ಸಂಕೀರ್ಣ, ರಾಜೀವ್ ಚೌಕ್ ಮೆಟ್ರೋ ನಿಲ್ದಾಣ, ಪಟೇಲ್ ಚೌಕ್ ಮೆಟ್ರೋ ನಿಲ್ದಾಣ ಮತ್ತು ನೋಯ್ಡಾದ ಕೆಲವು ಭಾಗಗಳು ಸೇರಿದಂತೆ 38 ಸ್ಥಳಗಳಲ್ಲಿ ಮೊಬೈಲ್ ವ್ಯಾನ್‌ಗಳ ಮೂಲಕ ಮಾರಾಟವನ್ನು ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಮಾರುಕಟ್ಟೆಯ ಮಧ್ಯಸ್ಥಿಕೆಯು ಸ್ಥಳೀಯ ಸರಬರಾಜುಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ರೈತರಿಂದ ನೇರವಾಗಿ ಖರೀದಿಸಿದ ಈರುಳ್ಳಿಯ ಬಫರ್ ಸ್ಟಾಕ್ ಅನ್ನು ಎನ್‌ಸಿಸಿಎಫ್ ನಿರ್ವಹಿಸುತ್ತಿದೆ.

    ಅತಿಯಾದ ಬೆಲೆಗಳಿಂದ ಗ್ರಾಹಕರನ್ನು ರಕ್ಷಿಸಲು ಮತ್ತು ಮಧ್ಯವರ್ತಿಗಳಿಗೆ ಆಗುವ ಲಾಭವನ್ನು ತಡೆಯಲು ಅದೇ ಈರುಳ್ಳಿಯನ್ನು ಪ್ರತಿ ಕೆಜಿಗೆ 35 ರೂ.ಗಳ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಾರಾಟಕ್ಕೆ ಆಫ್‌ಲೋಡ್ ಮಾಡಲಾಗುತ್ತದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದೆ.


    ರೈತರೊಂದಿಗೆ ನೇರವಾಗಿ ತೊಡಗಿಸಿಕೊಳ್ಳುವ ಮೂಲಕ ಮತ್ತು ರಿಯಾಯಿತಿ ದರದಲ್ಲಿ ಈರುಳ್ಳಿಯನ್ನು ನೀಡುವ ಮೂಲಕ, ಗ್ರಾಹಕರ ಮೇಲೆ ಬೆಲೆ ಏರಿಳಿತದ ಪರಿಣಾಮವನ್ನು ತಗ್ಗಿಸುವಲ್ಲಿ NCCF ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.

   ಪ್ರಸ್ತುತ ದೆಹಲಿ ಮತ್ತು ಎನ್ ಸಿಆರ್ ವ್ಯಾಪ್ತಿಯಲ್ಲಿ ಪ್ರತೀ ಕೆಜಿ ಈರುಳ್ಳಿ 60 ರೂನಲ್ಲಿ ಮಾರಾಟವಾಗುತ್ತಿದ್ದು, ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ದೆಹಲಿ ಮಾತ್ರವಲ್ಲದೇ ಭಾರತದ ಇತರೆ ರಾಜ್ಯಗಳಲ್ಲೂ ಈರುಳ್ಳಿ ದರದಲ್ಲಿ ಶೇ.40ರಷ್ಟು ದರ ಏರಿಕೆ ಕಂಡುಬಂದಿದೆ ಎನ್ನಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries