HEALTH TIPS

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ

            ರುದ್ರಪ್ರಯಾಗ: ಕೇದಾರನಾಥ ಮಾರ್ಗದಲ್ಲಿ ಸೋಮವಾರ ಸಂಜೆ ಸಂಭವಿಸಿದ್ದ ಭೂಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

           ಅವಶೇಷಗಳಡಿಯಿಂದ ನಾಲ್ವರು ಯಾತ್ರಾರ್ಥಿಗಳು ಮೃತದೇಹಗಳನ್ನು ಇಂದು (ಮಂಗಳವಾರ) ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

          ಮೃತರನ್ನು ಮಧ್ಯಪ್ರದೇಶದ ದುರ್ಗಾಭಾಯಿ ಖಾಪರ್ (50,) ಸಮನ್ ಭಾಯ್ (50), ಗುಜರಾತ್‌ನ ಭರತ್ ಭಾಯಿ ನಿರಾಲಾಲ್ (52) ಮತ್ತು ನೇಪಾಳದ ತಿತ್ಲಿ ದೇವಿ (70) ಎಂದು ಗುರುತಿಸಲಾಗಿದೆ.

               ಅವಶೇಷಗಳಡಿಯಲ್ಲಿ ಇನ್ನಷ್ಟು ಯಾತ್ರಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು                 ರುದ್ರಪ್ರಯಾಗ ಪೊಲೀಸರು ತಿಳಿಸಿದ್ದಾರೆ.


ಕೇದಾರನಾಥಕ್ಕೆ ಭೇಟಿ ನೀಡಿದ್ದ ಯಾತ್ರಾರ್ಥಿಗಳ ತಂಡವೊಂದು ಸೋಮವಾರ ರಾತ್ರಿ 7.20ರ      ಸುಮಾರಿಗೆ ಹಿಂದಿರುಗುತ್ತಿದ್ದ ವೇಳೆ ಭೂಕುಸಿತಕ್ಕೆ ಸಿಲುಕಿಕೊಂಡಿದ್ದರು.

           ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು.

             ಮಧ್ಯಪ್ರದೇಶದ ಗೋಪಾಲ್ (50) ಎಂಬವರ ಮೃತದೇಹ ಹೊರತೆಗೆಯಲಾಗಿತ್ತು. ಮೂವರನ್ನು ರಕ್ಷಣೆ ಮಾಡಲಾಗಿತ್ತು.

               ಪ್ರತಿಕೂಲ ಹವಾಮಾನ, ಗುಡ್ಡಜರಿತದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯುಂಟಾಗಿತ್ತು.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries