HEALTH TIPS

ಮಕ್ಕಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ: ಕೇರಳದಲ್ಲೂ ಎನ್ ಪಿಎಸ್ ವಾತ್ಸಲ್ಯ ಯೋಜನೆ ಆರಂಭ

               ತಿರುವನಂತಪುರಂ: ಮಕ್ಕಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಒದಗಿಸುವ ಎನ್ ಪಿಎಸ್ ವಾತ್ಸಲ್ಯ ಯೋಜನೆ ಕೇರಳದಲ್ಲೂ ಆರಂಭವಾಗಿದೆ.

                ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ಕೆ.ಎಸ್ ಮಾತನಾಡಿ, ಎನ್ ಪಿಎಸ್ ವಾತ್ಸಲ್ಯ ಯೋಜನೆಯು ಚಿಕ್ಕ ಪ್ರೀಮಿಯಂ ಮೂಲಕ ಮಕ್ಕಳ ಭವಿಷ್ಯವನ್ನು ಭದ್ರಪಡಿಸುವ ದೊಡ್ಡ ಯೋಜನೆಯಾಗಿದೆ ಎಂದರು. 

                ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿ ನೇತೃತ್ವದಲ್ಲಿ ತಿರುವನಂತಪುರಂ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

            ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸುವ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸಲು ಸಾರ್ವಜನಿಕ ವಲಯದ ಬ್ಯಾಂಕ್‍ಗಳು ಮುಂದಾಗಬೇಕು ಎಂದರು. ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್‍ಗಳು ಮತ್ತು ನಬಾರ್ಡ್‍ನ ಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ವಿವಿಧ ಶಾಲೆಗಳ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

             ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೋಜನೆಯನ್ನು ನವದೆಹಲಿ ವಿಜ್ಞಾನ ಭವನದಲ್ಲಿ ಉದ್ಘಾಟಿಸುವ ನೇರ ಪ್ರದರ್ಶನವನ್ನು ವ್ಯವಸ್ಥೆಗೊಳಿಸಲಾಗಿತ್ತು.  ಎನ್‍ಪಿಎಸ್ ವಾತ್ಸಲ್ಯಕ್ಕೆ ಸೇರ್ಪಡೆಗೊಳ್ಳಲು ಆನ್‍ಲೈನ್ ವೇದಿಕೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವರು, ಯೋಜನೆಯ ಕರಪತ್ರವನ್ನು ಬಿಡುಗಡೆ ಮಾಡಿದರು ಮತ್ತು ಯೋಜನೆಯ ಸದಸ್ಯರಾಗಿರುವ ಆಯ್ದ ಮಕ್ಕಳಿಗೆ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ (ಪಿ.ಆರ್.ಎ.ಎನ್.) ಕಾರ್ಡ್‍ಗಳನ್ನು ವಿತರಿಸಿದರು. ಉದ್ಘಾಟನೆಯ ಅಂಗವಾಗಿ ಕೇರಳ ಸೇರಿದಂತೆ ದೇಶದ ಸುಮಾರು 75 ಸ್ಥಳಗಳಲ್ಲಿ ಏಕಕಾಲಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೇರಳದ ತಿರುವನಂತಪುರ, ಕೋಯಿಕ್ಕೋಡ್ ಮತ್ತು ಲಕ್ಷದ್ವೀಪದ ಕವರಟ್ಟಿಯಲ್ಲಿ ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿಯ ನೇತೃತ್ವದಲ್ಲಿ ಸಮಾರಂಭಗಳು ನಡೆದವು.

                ಎನ್‍ಪಿಎಸ್ ಯೋಜನೆಯು ಪೋಷಕರಿಗೆ ತಮ್ಮ ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ಪಿಂಚಣಿ ಖಾತೆಯಲ್ಲಿ ಹಣವನ್ನು ಠೇವಣಿ ಮಾಡುವ ಮೂಲಕ ಮತ್ತು ಬಡ್ಡಿಯ ಮೂಲಕ ದೀರ್ಘಾವಧಿಯ ಸಂಪತ್ತನ್ನು ಪಡೆಯುವ ಮೂಲಕ ಅವರ ಭವಿಷ್ಯಕ್ಕಾಗಿ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅವಕಾಶವನ್ನು ನೀಡುತ್ತದೆ. ಪಾಲಕರು ತಮ್ಮ ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ಬ್ಯಾಂಕ್‍ಗಳು, ಅಂಚೆ ಕಚೇರಿಗಳು ಮತ್ತು ಆನ್‍ಲೈನ್ ಮೂಲಕ ಯೋಜನೆಯಲ್ಲಿ ರೂ 1000 ಠೇವಣಿ ಮಾಡುವ ಮೂಲಕ ಖಾತೆಯನ್ನು ತೆರೆಯಬಹುದು.

          ವರ್ಷಕ್ಕೆ ಕನಿಷ್ಠ 1000 ರೂಪಾಯಿ ಹೂಡಿಕೆ ಮಾಡಬಹುದು. ಈ ಹೊಸ ಉಪಕ್ರಮವು ಭಾರತದ ಪಿಂಚಣಿ ಸಂಪ್ರದಾಯದಲ್ಲಿ ಮಹತ್ವದ ಹೆಜ್ಜೆಯನ್ನು ಗುರುತಿಸುತ್ತದೆ, ಮಕ್ಕಳ ಹೆಸರುಗಳಲ್ಲಿ ಆರಂಭಿಕ ಹೂಡಿಕೆಯನ್ನು ಸಕ್ರಿಯಗೊಳಿಸುತ್ತದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‍ಆರ್‍ಡಿಎ) ಅಡಿಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries