HEALTH TIPS

ಉತ್ತರಾಖಂಡದಲ್ಲಿ ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

Top Post Ad

Click to join Samarasasudhi Official Whatsapp Group

Qries

 ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್‌ ಆಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ.

ಭೂಕುಸಿತ ಉಂಟಾಗಿ ಬೆಟ್ಟಗಳಿಂದ ಕಲ್ಲುಗಳು ಉರುಳಿ ರಸ್ತೆಗಳ ಮೇಲೆ ಬಿದ್ದಿರುವ ಪರಿಣಾಮ ಲಂಬಗಡ, ನಂದಪ್ರಯಾಗ, ಸೋನಾಳ ಮತ್ತು ಬ್ಯಾರೇಜ್ ಕುಂಜ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿ ತಿಳಿಸಿದೆ.

ಸಾಕೋಟ್-ನಂದಪ್ರಯಾಗ ನಡುವಿನ ಮಾರ್ಗವನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇತ್ತ ಕಾಮೇದಾ ಬಳಿಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಚಮೋಲಿ ಪೊಲೀಸರು ತಿಳಿಸಿದ್ದಾರೆ.

ಈಚೆಗೆ ಕೇದಾರನಾಥದ ಬಳಿಯ ಲಿಂಚೋಲಿಯಲ್ಲಿನ ಶಿಬಿರದಲ್ಲಿ ಭೂಕುಸಿತ ಸಂಭವಿಸಿತ್ತು. ನೇಪಾಳದ 26 ವರ್ಷದ ಕಲು ಬಹದ್ದೂರ್ ಎಂಬುವವರು ಮೃತಪಟ್ಟಿದ್ದರು. ಋಷಿಕೇಶದ ಶಿವಮಂದಿರ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಲ್ಲಿ ಎರಡು ಶವಗಳು ಪತ್ತೆಯಾಗಿದ್ದವು.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries