HEALTH TIPS

ಕಸಾಪದಿಂದ ಇಂದು ಬಾಯಿಕಟ್ಟೆಯಲ್ಲಿ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಜನ್ಮದಿನಾಚರಣೆ

ಉಪ್ಪಳ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 157ನೇ ಜನ್ಮ ದಿನಾಚರಣೆ  ಸೆ.15 ರಂದು ಸಂಜೆ 5ಕ್ಕೆ ಪೈವಳಿಕೆ ಬಾಯಿ ಕಟ್ಟೆ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯುವುದು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವುದು.

ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪ್ರೊ.ಪಿ.ಎನ್ ಮೂಡಿತ್ತಾಯ ಅವರು ಸರ್ ಎಂ. ವಿಶ್ವೇಶ್ವರಯ್ಯನವರ ಬದುಕು-ಸಾಧನೆಗಳ ಕುರಿತು ಉಪನ್ಯಾಸ ನೀಡುವರು.

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ನಿವೃತ್ತ ಮುಖ್ಯಶಿಕ್ಷಕ  ಕೆ.ಕೋಚಣ್ಣ ಶೆಟ್ಟಿ,ಕಸಾಪ ಸಂಘಟನಾ ಕಾರ್ಯದರ್ಶಿಗಳಾದ ವಿಶಾಲಾಕ್ಷ ಪುತ್ರಕಳ, ರಾಮಚಂದ್ರ ಭಟ್ ಧರ್ಮತ್ತಡ್ಕ, ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಉಪಸ್ಥಿತರಿರುವರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries