HEALTH TIPS

ಮತಾಂತರ: ಅಲಹಾಬಾದ್‌ ಹೈಕೋರ್ಟ್ ಉಲ್ಲೇಖ ತೆಗೆದುಹಾಕಿದ 'ಸುಪ್ರೀಂ'

 ವದೆಹಲಿ: ಧಾರ್ಮಿಕ ಸಮಾವೇಶಗಳಲ್ಲಿ ಮತಾಂತರ ನಿಲ್ಲ‌ದೇ ಹೋದರೆ ಈ ದೇಶದ ಬಹುಸಂಖ್ಯಾತರು ಒಂದು ದಿನ ಅಲ್ಪಸಂಖ್ಯಾತರಾಗುತ್ತಾರೆ ಎಂಬ ಅಲಹಾಬಾದ್‌ ಹೈಕೋರ್ಟ್‌ ಉಲ್ಲೇಖ ಮಾಡಿದ್ದನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಕಡತದಿಂದ ತೆಗೆದುಹಾಕಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಈ ಅಭಿಪ್ರಾಯ ವ್ಯಕ್ತಪಡಿಸಿತು.

ಆರೋಪಿ ವಿರುದ್ಧ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

'ಹೈಕೋರ್ಟ್‌ನ ಈ ಅಭಿಪ್ರಾಯಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಪ್ರಕರಣದ ವಿಲೇವಾರಿಗೂ ಅಡ್ಡಿಯಾಗುವುದಿಲ್ಲ. ಹಾಗೆಯೇ ಹೈಕೋರ್ಟ್ ಅಥವಾ ಯಾವುದೇ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಅಲಹಾಬಾದ್‌ ಹೈಕೋರ್ಟ್‌ನ ಈ ಅಭಿಪ್ರಾಯವನ್ನು ಉಲ್ಲೇಖಿಸುವಂತಿಲ್ಲ' ಎಂದು ಸುಪ್ರೀಂ ಕೋರ್ಟ್ ಸೂಚಿಸಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries