ಕಾಸರಗೋಡು: ಅಮೀಬಿಕ್ ಮಿದುಳು ಜ್ವರ ಬಾಧಿಸಿ ಚಿಕಿತ್ಸೆಯಲ್ಲಿದ್ದ ಚಟ್ಟಂಚಾಲ್ ಉಕ್ರಂಪಾಡಿ ನಿವಾಸಿ, ಮಣಿಕಂಠನ್(38)ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮುಂಬಯಿಯಲ್ಲಿ ಸಹೋದರನೊಂದಿಗೆ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಣಿಕಂಠನ್ ಅವರಿಗೆ ಅಸೌಖ್ಯ ಕಾಣಿಸಿಕೊಂಡಿದ್ದು, ಇದರಿಂದ ಊರಿಗೆ ಆಗಮಿಸಿದ ಇವರು ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜ್ವರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮೀಬಿಕ್ ಮಿದುಳುಜ್ವರ ಬಾಧಿಸಿರುವುದು ಪತ್ತೆಯಾಗಿತ್ತು.