HEALTH TIPS

ಹಣ ಅಕ್ರಮ ವರ್ಗಾವಣೆ ಪ್ರಕರಣ: ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು

 ವದೆಹಲಿಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ತಮಿಳುನಾಡು ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ ಮತ್ತು ಆಗಸ್ಟೀನ್‌ ಜಾರ್ಜ್‌ ಎಂ. ಅವರಿದ್ದ ಪೀಠ, ಜಾಮೀನು ನೀಡಿದೆ.

ಇ.ಡಿ. ಪರ ವಕಾಲತ್ತು ವಹಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮತ್ತು ಬಾಲಜಿ ಪರ ವಾದ ಮಂಡಿಸಿದ್ದ ಮುಕುಲ್‌ ರೋಹಟಗಿ, ಸಿದ್ಧಾರ್ಥ್‌ ಲುಥಾರ ಅವರ ವಿಚಾರಣೆಯನ್ನು ಆಗಸ್ಟ್‌ 12ರಂದು ನಡೆಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು.

2011 ರಿಂದ 2015ರಲ್ಲಿ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ಸೆಂಥಿಲ್‌ ಅವರು ಉದ್ಯೋಗ ಕೊಡಿಸುವುದಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪದಲ್ಲಿ 2023ರ ಜೂನ್‌ 14ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಇ.ಡಿ., ಆಗಸ್ಟ್‌ 12ರಂದು ಬಾಲಾಜಿ ವಿರುದ್ಧ 3,000 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು.ಸೆಂಥಿಲ್ ಅವರು 2018ರಲ್ಲಿ ಡಿಎಂಕೆ ಸೇರಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries