HEALTH TIPS

'ಅವರಿಬ್ಬರೂ ಸಂಪರ್ಕದಲ್ಲಿದ್ದರು': ಕೋಲ್ಕತ್ತಾ ಪ್ರಕರಣದಲ್ಲಿ ಘಟನೆ ಕುರಿತು ಕೋರ್ಟ್​ಗೆ ಸಿಬಿಐ ಮಾಹಿತಿ

           ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರ್.ಜೆ.ವೈದ್ಯಕೀಯ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್​ಪೆಕ್ಟರ್​ ಅಭಿಜಿತ್ ಮಂಡಲ್ ಅವರನ್ನು ಸಿಬಿಐ ಶನಿವಾರ ಬಂಧಿಸಿದ್ದು, ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

         ಈ ಸಂದರ್ಭದಲ್ಲಿ ಇವರಿಬ್ಬರೂ ಘಟನೆ ಬಳಿಕ ಪರಸ್ಪರ ಸಂಪರ್ಕದಲ್ಲಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

              ಅತ್ಯಾಚಾರ ಘಟನೆ ಬೆಳಕಿಗೆ ಬಂದ ನಂತರ ಇಬ್ಬರೂ ಪರಸ್ಪರ ಸಂಪರ್ಕದಲ್ಲಿದ್ದು, ಸಂದೀಪ್ ಗೆ ಹೇಗೆ ಪ್ರಕರಣದಲ್ಲಿ ಮುಂದುವರಿಯಬೇಕು ಎಂಬ ಸೂಚನೆಯನ್ನು ಅಭಿಜಿತ್​ ನೀಡಿದ್ದರು ಎಂದು ಸಿಬಿಐ ನ್ಯಾಯಾಲಯದಲ್ಲಿ ಇವರಿಬ್ಬರನ್ನು ಹಾಜರುಪಡಿಸಿದಾಗ ತಿಳಿಸಿದೆ.

          ಆಗಸ್ಟ್ 9 ರಂದು ಬೆಳಗ್ಗೆ 10 ಗಂಟೆಗೆ ವೈದ್ಯೆ ಸಾವಿನ ಬಗ್ಗೆ ಪೊಲೀಸ್ ಅಧಿಕಾರಿಗೆ ಮಾಹಿತಿ ಬಂದಿದೆ. ಆದರೆ, ರಾತ್ರಿ 11 ಗಂಟೆಗೆ ಎಫ್​ಐಆರ್ ದಾಖಲಿಸಲಾಗಿದೆ. ಇವರಿಬ್ಬರೂ ಒಟ್ಟಾಗಿ ಅಪರಾಧವನ್ನು ಕಡಿಮೆ ಮಾಡಲು ಮತ್ತು ಸತ್ಯ ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಇದು ಗಂಭೀರ ಪ್ರಕರಣವಾಗಿರುವುದರಿಂದ ಹತ್ಯೆಯನ್ನು ಪೊಲೀಸರು ಸುಮೋಟೋ ಪ್ರಕರಣವಾಗಿ ಪರಿಗಣಿಸಬೇಕಿತ್ತು ಎಂದು ಸಿಬಿಐ ನ್ಯಾಯಾಲಯದಲ್ಲಿ ಹೇಳಿದೆ.

            ವೈದ್ಯಕೀಯ ಕಾಲೇಜಿನ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಸಂದೀಪ್​ರನ್ನು ಈಗಾಗಲೇ ಸಿಬಿಐ ಬಂಧಿಸಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries