HEALTH TIPS

ಮುಜುಂಗಾವು ವಿದ್ಯಾಪೀಠದಲ್ಲಿ ಓಣಂ ಆಚರಣೆ

ಕುಂಬಳೆ: ಮುಜುಂಗಾವು  ಶ್ರೀ ಭಾರತಿ ವಿದ್ಯಾಪೀಠದಲ್ಲಿ ಓಣಂ ಹಬ್ಬವನ್ನು ಹಾಗೂ ಅಧ್ಯಾಪಕರ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ತರಗತಿಯ ಮಕ್ಕಳು ಹೂವಿನ ರಂಗೋಲಿ ರಚಿಸಿ ಸಂಭ್ರಮಿಸಿದರು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕವೃಂದ ಕೇರಳದ ಸಾಂಪ್ರದಾಯಿಕ ಉಡುಗೆಯೊಂದಿಗೆ  ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಓಣಂ ವಿಶೇಷ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಬಳಿಕ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅಧ್ಯಾಪಕ ದಿನದ ಅಂಗವಾಗಿ ಅಧ್ಯಾಪಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದರು. 


ಮುಖ್ಯ ಶಿಕ್ಷಕ ಶ್ಯಾಮ್ ಭಟ್ ದರ್ಬೆಮಾರ್ಗ ಮಕ್ಕಳಿಗೆ ಓಣಂ ಶುಭಾಶಯ ತಿಳಿಸಿದರು. 

ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಮಕ್ಕಳಿಗೆ ಓಣಂ ಹಬ್ಬದ ಮಹತ್ವದ ಬಗ್ಗೆ ವಿವರಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ಹಾಗೂ ರಕ್ಷಕರು, ಅಧ್ಯಾಪಕ ವೃಂದ ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries