HEALTH TIPS

ಮಮತಾ ಬ್ಯಾನರ್ಜಿ ರಾಜೀನಾಮೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

          ವದೆಹಲಿ: ಕೋಲ್ಕತ್ತದ ಆರ್.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

          ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿ, ಇಂತಹ ಆದೇಶವನ್ನು ಪ್ರಕಟಿಸಲು ತನಗೆ ಯಾವುದೇ ಅವಕಾಶವಿಲ್ಲ ಎಂದು ಅರ್ಜಿಯನ್ನು ತಳ್ಳಿ ಹಾಕಿತು.

            'ವೈದ್ಯರ ಕುಂದುಕೊರತೆಗಳ ಬಗ್ಗೆ ಗಮನಹರಿಸಬಹುದೇ ಹೊರತು ಮುಖ್ಯಮಂತ್ರಿ ಒಬ್ಬರಿಗೆ ರಾಜೀನಾಮೆ ನೀಡಬೇಕು ಎಂದು ಹೇಳಲು, ಇದು ರಾಜಕೀಯ ವೇದಿಕೆಯಲ್ಲ ಹಾಗೂ ಅಂತಹ ಆದೇಶ ಹೊರಡಿಸುವುದು ತಮ್ಮ ಅಧಿಕಾರದ ಭಾಗವಲ್ಲ' ಎಂದು ಪೀಠ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries