HEALTH TIPS

ಶಾಲಾ ಆವರಣದಲ್ಲಿ ಮಗನ ಮದುವೆ: ಶಿಕ್ಷಕಿಗೆ ಶುದ್ಧ ನೀರಿನ ಘಟಕ ಅಳವಡಿಸಲು ನಿರ್ದೇಶನ

             ಮೀರ್‌ಪುರ: ಸರ್ಕಾರಿ ಶಾಲೆಯ ಆವರಣದಲ್ಲಿ ಮಗನ ಮದುವೆ ಆಯೋಜಿಸಿದ್ದಕ್ಕಾಗಿ ನಾಲ್ಕು ವಾರಗಳ ಒಳಗಾಗಿ ಶಾಲೆಯಲ್ಲಿ ಎರಡು ಕುಡಿಯುವ ನೀರಿನ ಶುದ್ಧೀಕರಣ ಯಂತ್ರಗಳನ್ನು ಅಳವಡಿಸುವಂತೆ ಶಿಕ್ಷಕಿಯೊಬ್ಬರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್‌ ಸೋಮವಾರ ಆದೇಶ ನೀಡಿದೆ.

         ಸುಲ್ಗನ್‌ ಗ್ರಾಮದಲ್ಲಿನ ಸರ್ಕಾರಿ ಶಾಲೆಯಲ್ಲಿ 2021ರ ನವೆಂಬರ್‌ 5ರಂದು ಮದುವೆ ನೆರವೇರಿತ್ತು.

ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ಮದುವೆಯಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಸ್ಥಳೀಯ ನಿವಾಸಿ ಶಶಿಕಾಂತ್‌ ಎಂಬುವರು ಶಿಕ್ಷಣ ಇಲಾಖೆಗೆ ಇ-ಮೇಲ್‌ ಮೂಲಕ ಹಾಗೂ ಮುಖ್ಯಮಂತ್ರಿ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದರು.

            ಶಿಕ್ಷಣ ಇಲಾಖೆ ಅಧಿಕಾರಿಗಳು ನವೆಂಬರ್‌ 8ರಂದು ತಪಾಸಣೆಗಾಗಿ ಬಂದಾಗಲೂ ಮದುವೆ ನಡೆದಿರುವುದು ದೃಢಪಟ್ಟಿತ್ತು. ಆದರೆ, ಯಾರ ಮೇಲೆಯೂ ಕ್ರಮ ಕೈಗೊಂಡಿರಲಿಲ್ಲ. ಸಹಾಯವಾಣಿಯಿಂದಲೂ ಸರಿಯಾದ ಉತ್ತರ ದೊರೆಯಲಿಲ್ಲ. ಆದ್ದರಿಂದ, ಶಶಿಕಾಂತ್‌ ಅವರು ಮದುವೆ ನಡೆಸಿರುವ ಕುರಿತು ಆರ್‌ಟಿಐ ಮೂಲಕ ಮಾಹಿತಿ ಪಡೆದು, ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

                ಈ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಅಜಯ್‌ ಮೋಹನ್‌ ಗೋಯಲ್‌ ಸೋಮವಾರ ವಿಚಾರಣೆ ನಡೆಸಿದರು. ಶಾಲೆಯ ಮುಖ್ಯೋಪಾಧ್ಯಾಯರು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದರು. ಆದರೆ, ಈಗ ಅವರು ನಿವೃತ್ತರಾಗಿದ್ದು, ಮನೆಯ ವಿಳಾಸವನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries