HEALTH TIPS

ನಾಲಂದ ಕಾಲೇಜಿನಲ್ಲಿ ಗುರುವಂದನೆ ಕಾರ್ಯಕ್ರಮ

            ಪೆರ್ಲ: ಪೆರ್ಲದ ನಾಲಂದ ಕಾಲೇಜಿನಲ್ಲಿ ಶಿಕ್ಷಕರ ದಿನದ ಅಂಗವಾಗಿ ನಾಲಂದ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಲೇಜು ಎನ್ನೆಸ್ಸೆಸ್ ಘಟಕದ ಜಂಟಿ ಆಶ್ರಯದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಶಂಕರ ಖಂಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಯಣದ ಬತ್ತಿ ತಾನು ಕರಗಿ ಇತರರಿಗೆ ಬೆಳಕು ಚೆಲ್ಲುವಂತೆ ಓರ್ವ ಶಿಕ್ಷಕ ವಿದ್ಯಾರ್ಥಿಯ ಉನ್ನತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಾನೆ ಎಂದರು. 

              ಕಾಲೇಜು ಆಡಳಿತ ಮಂಡಳಿ ಸದಸ್ಯ ರಾಜಶೇಖರ್ ಪೆರ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೆರ್ಲ ಶ್ರೀ ಸತ್ಯನಾರಾಯಣ ಶಾಲೆಯ ನಿವೃತ್ತ ಶಿಕ್ಷಕ ಬಳ್ಳಂಬೆಟ್ಟು ಈಶ್ವರ ಭಟ್ ಅವರಿಗೆ ಗುರುನಮನ ಸಲ್ಲಿಸಲಾಯಿತು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಶಿತ್ ಕೆ. ಸ್ವಾಗತಿಸಿ,. ಸ್ವಯಂ ಸೇವಕಿ ಝಿನಾನ ವಂದಿಸಿದರು. ಶ್ರೀಲಕ್ಷ್ಮಿ ನಿರೂಪಿಸಿದರು. ಶಿಕ್ಷಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries