HEALTH TIPS

ಅಹಿತಕರ ಘಟನೆ-ಗಡಿ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಚುರುಕು

               ಕಾಸರಗೋಡು: ಕೋಮುಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿಯ ಕೆಲವೊಂದು ಅಹಿತಕರ ಘಟನೆ ದ.ಕ ಜಿಲ್ಲೆಯ ವಿವಿಧೆಡೆ ನಡೆದಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಪೊಲೀಸರು ಕಟ್ಟೆಚ್ಚರ ಪಾಲಿಸಿದ್ದಾರೆ. ಗಡಿ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶಾನುಸಾರ ಬಂದೋಬಸ್ತ್ ಹಾಗೂ ಗಸ್ತು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. 

            ತಲಪ್ಪಾಡಿ, ಕೆದುಂಬಾಡಿ, ಆನೆಕಲ್ಲು, ಪೆರ್ಲ-ಅಡ್ಕಸ್ಥಳ, ಆದೂರು, ಪಾಣತ್ತೂರು ಪ್ರದೇಶಗಳಲ್ಲಿ ಪೊಲೀಸರು ತಪಾಸಣಾ ಕಾರ್ಯ ಚುರುಕುಗೊಳಿಸಿದ್ದಾರೆ. ಅವಳಿ ಜಿಲ್ಲೆಗಳಿಂದ ಗಡಿ ಪ್ರವೇಶಿಸುತ್ತಿರುವ ವಾಹನಗಳ ಸಂಪೂರ್ಣ ಮಾಹಿತಿ ಪಡೆದುಕೊಂಡೇ ಪೊಲೀಸರು ವಾಹನಗಳನ್ನು ಮುಂದಕ್ಕೆ ಬಿಟ್ಟುಕೊಡುತ್ತಿದ್ದಾರೆ. ರಜ್ಯ ಪೊಲೀಸ್ ಗುಪ್ತಚರ ವಿಭಾಗಕ್ಕೆ ಲಭಿಸಿದ ಮಾಹಿತಿಯನ್ವಯ ವಾಹನಗಳಲ್ಲಿ ಸಂಚರಿಸುವ ಶಂಕಿತರನ್ನು ಸಮಗ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries