ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು GST ಕುರಿತು ಪ್ರಶ್ನೆ ಕೇಳಿದ ಉದ್ಯಮಿಯನ್ನು ಕೊಠಡಿಗೆ ಕರೆಸಿ ಕ್ಷಮೆ ಕೇಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಮುಖ ಉದ್ಯಮಿಗಳೊಂದಿಗೆ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾವಹಿಸಿದ್ದರು.
ಸಭೆಯಲ್ಲಿನ ಚರ್ಚೆಯ ವೇಳೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಕೀರ್ಣತೆಗಳ ಬಗ್ಗೆ ಅನ್ನಪೂರ್ಣ ಹೊಟೆಲ್ ಗಳ ಸಮೂಹದ ಮಾಲೀಕ ಶ್ರೀನಿವಾಸನ್ ಅವರು ನಿರ್ಮಲಾ ಸೀತಾರಾಮನ್ ಅವರನ್ನು ಪ್ರಶ್ನಿಸಿದ್ದರು.
ಜಿಎಸ್ಟಿ ಬಗ್ಗೆ ತಮ್ಮನ್ನು ಪ್ರಶ್ನಿಸಿದ್ದಕ್ಕೆ ಶ್ರೀನಿವಾಸನ್ ವಿರುದ್ಧ ಗುಡುಗಿದ ನಿರ್ಮಲಾ ಸೀತಾರಾಮನ್, ತಮ್ಮ ಬಳಿ ಶ್ರೀನಿವಾಸನ್ ಕ್ಷಮೆ ಕೇಳುವಂತೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತ ವಿಡಿಯೋಗಳೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಜಿಎಸ್ಟಿ ಬಗೆಗಿನ ಸಂಕೀರ್ಣತೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅನ್ನಪೂರ್ಣ ಗ್ರೂಪ್ ಅಧ್ಯಕ್ಷ ಶ್ರೀನಿವಾಸನ್ ಪ್ರಶ್ನಿಸಿದ್ದಾರೆ. ಬಳಿಕ, ತಮ್ಮ ಪ್ರಶ್ನೆಯ ಕಾರಣಕ್ಕಾಗಿ ಕ್ಷಮೆ ಕೇಳಿದ್ದಾರೆ. ಅವರು ಪ್ರಶ್ನಿಸಿ, ಕ್ಷಮೆ ಕೇಳಿದ ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿರ್ಮಲಾ ಸೀತಾರಾಮನ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.