HEALTH TIPS

IAS ಸೇವೆಯಿಂದ ಪೂಜಾ ಖೇಡ್ಕರ್ ಅವರನ್ನು ವಜಾಗೊಳಿಸಿದ ಕೇಂದ್ರ

         ವದೆಹಲಿ: ಕೇಂದ್ರ ಸರ್ಕಾರವು ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಡಳಿತ ಸೇವೆಯಿಂದ (ಐಎಎಸ್‌) ವಜಾಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

          ಸುಳ್ಳು ದಾಖಲೆ ನೀಡಿದ ಆರೋಪದ ಮೇಲೆ ಪೂಜಾ ಖೇಡ್ಕರ್ ಅವರ ನೇಮಕಾತಿ ಆದೇಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರದ್ದುಗೊಳಿಸಿದ ಒಂದು ತಿಂಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

         2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಎಲ್ಲ ಆರೋಪಗಳನ್ನು ಪೂಜಾ ನಿರಾಕರಿಸಿದ್ದಾರೆ.

ಪುಣೆಯಲ್ಲಿ ತರಬೇತಿಯಲ್ಲಿದ್ದ ವೇಳೆ ಪೂಜಾ ತಮ್ಮ ಅಧಿಕಾರ ಹಾಗೂ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಸಹ ಆರೋಪಿಸಲಾಗಿದೆ.

              ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿತ್ತು.

           ಏತನ್ಮಧ್ಯೆ, ನಕಲಿ ಅಂಗವೈಕಲ್ಯ ವೈದ್ಯಕೀಯ ಪ್ರಮಾಣಪತ್ರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಏಮ್ಸ್ ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ನಾನು ತಯಾರಿದ್ದೇನೆ ಎಂದು ದೆಹಲಿ ಹೈಕೋರ್ಟ್‌ಗೆ ಪೂಜಾ ಖೇಡ್ಕರ್ ತಿಳಿಸಿದ್ದರು. ಯುಪಿಎಸ್‌ಸಿ ದೂರಿನ ಮೇರೆಗೆ ದೆಹಲಿ ಪೊಲೀಸರ ತನಿಖೆ ಪ್ರಗತಿಯಲ್ಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries