HEALTH TIPS

Laddu Row | FSSAI ವರದಿ ಬಳಿಕ ಕ್ರಮ - ಗ್ರಾಹಕರ ವ್ಯವಹಾರಗಳ ಇಲಾಖೆ

 ವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್‌ಎಸ್‌ಎಸ್‌ಎಐ)ದಿಂದ ವರದಿ ಬಂದ ನಂತರ ಮಾರುಕಟ್ಟೆಯಲ್ಲಿ ತುಪ್ಪದ ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡಲು ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ನಮ್ಮ ಇಲಾಖೆ ಪರಿಗಣಿಸಲಿದೆ ಎಂದು ಗ್ರಾಹಕರ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ.

ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆಹಾರ ಸುರಕ್ಷತೆ ಎಫ್‌ಎಸ್‌ಎಸ್‌ಎಐ ವ್ಯಾಪ್ತಿಗೆ ಬರುತ್ತದೆ. ಅದರ ವರದಿಗಾಗಿ ನಾವು ಕಾಯುತ್ತಿದ್ದೇವೆ' ಎಂದರು.

'ಅಗತ್ಯಬಿದ್ದರೆ ಎಫ್‌ಎಸ್‌ಎಸ್‌ಎಐ ವರದಿ ಮತ್ತು ರಾಷ್ಟ್ರೀಯ ಗ್ರಾಹಕರ ಸಹಾಯವಾಣಿಗೆ(ಎನ್‌ಸಿಎಚ್‌) ಬಂದ ದೂರುಗಳನ್ನು ಪರಿಗಣಿಸಿ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಎನ್‌ಸಿಎಚ್‌ಯಲ್ಲಿ ಸ್ವೀಕರಿಸಿದ ದೂರುಗಳನ್ನು ಸಾಮಾನ್ಯವಾಗಿ ಎಫ್‌ಎಸ್‌ಎಸ್‌ಎಐಗೆ ವರ್ಗಾಯಿಸಲಾಗುತ್ತದೆ' ಎಂದು ಸ್ಪಷ್ಟಪಡಿಸಿದರು.

'ತಿರುಪತಿಯಲ್ಲಿ ಲಡ್ಡು ತಯಾರಿಸಲು, ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು' ಎಂದು ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಈ ವಿಷಯ ದೇಶಾದಾದ್ಯಂತ ಆಹಾರ ಸುರಕ್ಷತೆ ಬಗ್ಗೆ ಆತಂಕ ಮೂಡಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries