HEALTH TIPS

ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ -2024: ನೋಂದಾವಣಾ ದಿನಾಂಕ ವಿಸ್ತರಣೆ

ಕಾಸರಗೋಡು: ಜಿಲ್ಲೆಯ ಪ್ರತಿ ಶಾಲಾ,ಕಾಲೇಜಿನ 10 ರಿಂದ 25 ವಿದ್ಯಾರ್ಥಿಗಳು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ವಿದ್ಯಾರ್ಥಿ ಪ್ರತಿನಿಧಿಗಳಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಈ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗುವುದು.

ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕಥೆ,ಕವನ ಸ್ಪರ್ಧೆ ಮತ್ತು ಸಮೂಹ ಗೀತಾ ಗಾಯನ, ಸಮೂಹ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನದ ನೋಂದಾವಣಿಯ ದಿನಾಂಕ 30-10-2024 ರ ವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ )ಕೇರಳ ರಾಜ್ಯ ಘಟಕ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿμÁ್ಠನ (ರಿ )ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2024 ನವೆಂಬರ್ 10 ಆದಿತ್ಯವಾರದಂದು ಒಂದು ದಿನದ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ 2024 ವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಮ್ಮೇಳನದಲ್ಲಿ ಶಾಲಾ ಮಕ್ಕಳ ಕವಿಗೋಷ್ಠಿ,ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ, ಬಹುಭಾμÁ ವಿದ್ಯಾರ್ಥಿಗಳ ಕವಿಗೋಷ್ಠಿ  ಮತ್ತು ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಗೋಷ್ಠಿಯನ್ನು ಏರ್ಪಡಿಸಲಾಗಿದೆ.

 ಕಾಸರಗೋಡು ಜಿಲ್ಲೆ ಸಹಿತ ಕೇರಳ ಮತ್ತು ಕರ್ನಾಟಕ ರಾಜ್ಯದ ಪ್ರತಿ ಶಾಲಾ ಕಾಲೇಜಿನ 10 ರಿಂದ 25 ಮಂದಿ ವಿದ್ಯಾರ್ಥಿಗಳು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ವಿದ್ಯಾರ್ಥಿ ಪ್ರತಿನಿಧಿಗಳಾಗಿ ಸಕ್ರಿಯವಾಗಿ ಭಾಗವಹಿಸಲು ಅವಕಾಶವನ್ನು ನೀಡಲಾಗಿದೆ. ಈ ವಿದ್ಯಾರ್ಥಿಗಳ    

ಹೆಸರನ್ನು ದಿನಾಂಕ 30-10-2024 ರ ಮುಂಚಿತವಾಗಿ ತಮ್ಮ ತರಗತಿ, ಮೊಬೈಲ್ ಸಂಖ್ಯೆ, ಶಾಲಾ-ಕಾಲೇಜಿನ ಹೆಸರು ಮುಖ್ಯಸ್ಥರ ದೃಢೀಕರಣ ಪತ್ರದೊಂದಿಗೆ ಪ್ರಥಮ ಪ್ರಾಶಸ್ತ್ಯ ದೊಂದಿಗೆ 

ನೋoದಾವಣಿಗೊಳಿಸಬೇಕು. ಶಾಲಾ ಕಾಲೇಜಿನ ಮುಖ್ಯೋಪಾಧ್ಯಾಯರು ಪ್ರಾಂಶುಪಾಲರು ತಮ್ಮ ಶಾಲಾ ಕಾಲೇಜಿನಿಂದ ಭಾಗವಹಿಸುವ ವಿದ್ಯಾರ್ಥಿಗಳ ಹೆಸರಿನ ಒಟ್ಟು ಪಟ್ಟಿಯನ್ನು ಲೆಟರ್ ಹೆಡ್ ಅಥವಾ ಬಿಳಿ ಕಾಗದದಲ್ಲಿ ಬರೆದು ಕಳುಹಿಸಬೇಕು. ಎಲ್ಲಾ ಪ್ರತಿನಿಧಿಗಳಿಗೆ ಬೆಳಗಿನ ಉಪಹಾರ ಮಧ್ಯಾಹ್ನದ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.

 ಕಾಸರಗೋಡು ಕನ್ನಡ ಗ್ರಾಮದಲ್ಲಿ 60 ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಫಲಪುಷ್ಪಗಳ ಸಸಿ/ ಗಿಡಗಳನ್ನು ನೆಟ್ಟು ನೀರು ಹಾಕಿ ವಿಶಿಷ್ಟ ರೀತಿಯಲ್ಲಿ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಾಗುವುದು.

ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯ,ಕರ್ನಾಟಕ, ಮಹಾರಾಷ್ಟ್ರ,ಗೋವಾ, ನವದೆಹಲಿ,ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯದ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು,ಅದ್ಯಾಪಕರು ಹೆತ್ತವರು, ಪೆÇೀಷಕರು ಈ ಮೇಲಿನ ರಾಜ್ಯದ ಸಂಘ ಸಂಸ್ಥೆಗಳ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಪದಾಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.

ಈಗಾಗಲೇ 60 ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಸ್ಪರ್ಧೆಗಳು,ಸಮೂಹ ಗಾಯನ ಸಾಂಸ್ಕೃತಿಕ ವೈವಿಧ್ಯ, ಕಾರ್ಯಕ್ರಮಗಳ ಪ್ರದರ್ಶನಕ್ಕೆ ತಮ್ಮ ಶಾಲಾ-ಕಾಲೇಜಿನ ಹೆಸರನ್ನು ನೋಂದಾಯಿಸುತ್ತಿದ್ದಾರೆ. 

ಅಂತರ್ ರಾಜ್ಯದ ಸುಮಾರು 1000 ಪ್ರತಿನಿಧಿಗಳಿಗೆ ಆಹ್ವಾನ ನೀಡಿದ್ದು ಬೃಹತ್ ಸಂಖ್ಯೆಯಲ್ಲಿ ಮಕ್ಕಳು,ಹೆತ್ತವರು, ಪೆÇೀಷಕರು ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ.

ವಿವಿಧ ಜಿಲ್ಲೆ ತಾಲೂಕು,ಬ್ಲಾಕ್ ಗ್ರಾಮ ಪಂಚಾಯತ್ ಗಳಿಂದ ವಿವಿಧ ತಳಿಯ ಹಣ್ಣುಗಳು, ಫಲ ಪುಷ್ಪಗಳ ಗಿಡಗಳನ್ನು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು,ಅಧ್ಯಾಪಕರು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷರು, ಪದಾಧಿಕಾರಿಗಳು ಆಗಮಿಸುವಾಗ ಅಭಿಮಾನವಿಟ್ಟು ತರಲಿದ್ದಾರೆ.

ಈ ಗಿಡಗಳನ್ನು ಕಾಸರಗೋಡು ಕನ್ನಡ ಗ್ರಾಮದ ಪರಿಸರದಲ್ಲಿ ನೆಡಲಾಗುವುದು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಇದರ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು 2025 ನವೆಂಬರ್ 4ರಂದು 60 ವರ್ಷ ಪೂರೈಸಲಿದ್ದಾರೆ.ಈ ಸಂದರ್ಭದಲ್ಲಿ ಶಿವರಾಮ ಕಾಸರಗೋಡು ಸಂಸ್ಥಾಪಕ ಅಧ್ಯಕ್ಷರಾಗಿರುವ ಕರಾವಳಿ ಸಾಂಸ್ಕೃತಿಕ ಪ್ರತಿμÁ್ಠನ (ರಿ ) ಕನ್ನಡ ಗ್ರಾಮ ಕಾಸರಗೋಡು ಇದರ 35ನೇ ಸಂಸ್ಥಾಪನಾ ವμರ್Áಚರಣೆಯು 2025 ನವೆಂಬರ್ 4ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಗ್ರಾಮ ಸಮುಚ್ಚಯ ಸಾಂಸ್ಕೃತಿಕ ಕೇಂದ್ರದ ಕಾರ್ಯ ಯೋಜನೆಗಳ ಶಂಕುಸ್ಥಾಪನೆ ನಡೆಯಲಿದೆ.

ವಿ. ಸೂ 1 :- ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಓಪ್ಪಿರುವ ಮುಖ್ಯ ಅತಿಥಿಗಳು ವಿಶೇಷ ಆಹ್ವಾನಿತರು ತಮ್ಮ ಚುಟುಕು ಭಾಷಣವನ್ನು ಬಿಳಿ ಕಾಗದದಲ್ಲಿ ಮೂರು ಪುಟಗಳಿಗೆ ಮೀರದಂತೆ ಕೈಬರಹದ ಮೂಲಕ ಬರೆದು ತರಬೇಕು.ಈ ಭಾಷಣವನ್ನು ಸಮ್ಮೇಳನದ ನೆನಪಿನ ಸ್ಮರಣ ಸಂಚಿಕೆಯಲ್ಲಿ ಮುದ್ರಿಸಲಾಗುವುದು .ತಮ್ಮ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೆÇೀಟೋ ಮತ್ತು ಪೂರ್ಣ ವಿಳಾಸವನ್ನು ಬರೆದಿರಬೇಕು.

ವಿ. ಸೂ 2 :- ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ ).ಇದರ ವಿವಿಧ ರಾಜ್ಯ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಗೌರವ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಗುವುದು. ಆದುದರಿಂದ ತಮ್ಮ ಒಂದು ಪಾಸ್ಪೋರ್ಟ್ ಸೈಜ್ ನ ಫೆÇೀಟೋ ಮತ್ತು ಪೂರ್ಣ ವಿಳಾಸವನ್ನು ಅಂಚೆ ಪತ್ರದ ಮೂಲಕ ಕಳುಹಿಸಬೇಕು ಹಾಗೂ ತಮ್ಮ ಜಿಲ್ಲೆಯಿಂದ ಆಗಮಿಸುವ ಪದಾಧಿಕಾರಿಗಳು,  ವಿದ್ಯಾರ್ಥಿಗಳು,ಹೆತ್ತವರೂ ಪೆÇೀಷಕರು, ಅಧ್ಯಾಪಕರ ಹೆಸರು ವಿಳಾಸ ಮೊಬೈಲ್ ಸಂಖ್ಯೆಯನ್ನು ಬರೆದು ಕಳುಹಿಸಿಕೊಡಿರಿ.

  ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾ ವಿಜೇತರಿಗೆ ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಸಮ್ಮೇಳನದಂದು ಕಾಸರಗೋಡು ಕನ್ನಡ ಗ್ರಾಮಕ್ಕೆ ಬಂದು ಹೋಗುವ ಬಸ್ಸು ಪ್ರಯಾಣ ವೆಚ್ಚವನ್ನು ನೀಡಲಾಗುವುದಿಲ್ಲ. ತಾವೇ ಪ್ರಯಾಣದ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ,ವಸ್ತು ಪ್ರದರ್ಶನ, ಕಲಾಪ್ರದರ್ಶನ,ಆಹಾರ ಮೇಳ, ಕ್ಯಾಂಟೀನ್ ಸೌಲಭ್ಯ ಮತ್ತು ವಿವಿಧ ಸ್ವ ಸಹಾಯ ಯೋಜನೆಯ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ.

ಗೃಹ ಆತಿಥ್ಯ:- ಹೊರ ರಾಜ್ಯದ ಮುಖ್ಯ ಅತಿಥಿಗಳಿಗೆ ವಿಶೇಷ ಆಹ್ವಾನಿತರಿಗೆ ಹಾಗೂ ಹೊರ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳು ಸಾಂಸ್ಕೃತಿಕ ತಂಡಗಳ ಸದಸ್ಯರಿಗೆ ಗೃಹ ಆತಿಥ್ಯ ಸಂಭ್ರಮದ ಮೂಲಕ ಗಡಿನಾಡ ಕನ್ನಡಿಗರ ಮನೆಯಲ್ಲಿ ಆತಿಥ್ಯ ನೀಡಲು ಉದ್ದೇಶಿಸಲಾಗಿದೆ. ವಿವಿಧ ಶಾಲಾ-ಕಾಲೇಜಿನ ಅಧ್ಯಾಪಕರು ವಿದ್ಯಾರ್ಥಿಗಳ ತಂಡಗಳಿಗೆ ನೇತೃತ್ವ ವಹಿಸಲಿದ್ದು ಇವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಶಿವರಾಮ ಕಾಸರಗೋಡು ಅಧ್ಯಕ್ಷರು ಕರಾವಳಿ ಸಾಂಸ್ಕೃತಿಕ ಪ್ರತಿμÁ್ಠನ (ರಿ )ಕನ್ನಡ ಗ್ರಾಮ ಕಾಸರಗೋಡು.* 

*ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕನ್ನಡ ಗ್ರಾಮ ಕಾಸರಗೋಡು- 671121

*ಮೊಬೈಲ್ ಸಂಖ್ಯೆ*:- *9448572016



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries