HEALTH TIPS

ಮಹದೇವ್ ಬೆಟ್ಟಿಂಗ್ ಆಯಪ್ ಪ್ರಕರಣ: ಸುನೀಲ್‌ ದಮ್ಮಾನಿಗೆ ಸುಪ್ರೀಂಕೋರ್ಟ್‌ ಜಾಮೀನು

         ವದೆಹಲಿ: ಮಹದೇವ ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಆಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿದ್ದ ಛತ್ತೀಸಗಢದ ಉದ್ಯಮಿ ಸುನೀಲ್‌ ದಮ್ಮಾನಿಗೆ ಗುರುವಾರ ಸುಪ್ರೀಂಕೋರ್ಟ್‌ ಜಾಮೀನು ನೀಡಿದೆ.

           2023ರ ಆಗಸ್ಟ್‌ 23ರಿಂದ ಸುನೀಲ್‌ ದಮ್ಮಾನಿ ಜೈಲಿನಲ್ಲಿದ್ದಾರೆ. ಛತ್ತೀಸಗಢದ ಹೈಕೋರ್ಟ್‌ ಕೂಡ ದಮ್ಮಾನಿಗೆ ಜಾಮೀನು ನಿರಾಕರಿಸಿತ್ತು. ಹೀಗಾಗಿ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್‌ ಕದ ತಟ್ಟಿದ್ದರು.

             ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ, ಮನೋಜ್‌ ಮಿಶ್ರಾ, ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries