HEALTH TIPS

'ಕಾಂತಾರ' ಕಂಪು: ರಾಷ್ಟ್ರಪತಿಯಿಂದ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

 ವದೆಹಲಿ:ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ, ಬ್ಲಾಕ್​ಬಸ್ಟರ್​ 'ಕಾಂತಾರ' ಚಿತ್ರದಲ್ಲಿನ ಅಮೋಘ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award) ಪಡೆದ ನಟ ರಿಷಬ್ ಶೆಟ್ಟಿ (Rishab Shetty), ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.


ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕನ್ನಡಿಗರಲ್ಲಿ ಭಾರೀ ಸಂತಸವನ್ನು ಉಂಟುಮಾಡಿದೆ.

70ನೇ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾದ ನಟ ರಿಷಬ್ ಶೆಟ್ಟಿ, ಕಾಂತಾರ ಚಿತ್ರಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ್ದಾರೆ. ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿ ಪಡೆದಿದ್ದು, ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ. 2022ರಿಂದಲೂ ಕಾಂತಾರ ಕಂಪು ಜಾಗತಿಕವಾಗಿ ಪಸರಿಸಿದ್ದು, ಇತರೆ ಚಿತ್ರರಂಗದ ಗಣ್ಯುರು ಇದೀಗ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದ್ದಾರೆ. ಸ್ಯಾಂಡಲ್​ವುಡ್​ನೊಂದಿಗೆ ನಾವು ಕೈಜೋಡಿಸಬೇಕು, ಅವರೊಟ್ಟಿಗೆ ಸಿನಿಮಾ ಮಾಡಬೇಕು ಎಂಬ ಆಶಯ ವ್ಯಕ್ತಪಡಿಸಿರುವುದು ಕನ್ನಡ ಸಿನಿರಂಗದ ಹಿರಿಮೆಯನ್ನು ಹೆಚ್ಚಿಸಿದೆ.

ಇನ್ನು ಇದೇ ವೇದಿಕೆಯಲ್ಲಿ 'ತಿರುಚಿತ್ರಾಂಬಲಂ' ಚಿತ್ರಕ್ಕಾಗಿ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಕನ್ನಡತಿ, ಬಹುಭಾಷಾ ತಾರೆ ನಿತ್ಯಾ ಮೆನನ್​, ರಾಷ್ಟ್ರಪತಿಯಿಂದ ಈ ಅವಾರ್ಡ್​ ಸ್ವೀಕರಿಸಿದ್ದಾರೆ. ಒಂದೇ ಸಮಾರಂಭದಲ್ಲಿ ಇಬ್ಬರು ಕನ್ನಡಿಗರು ರಾಷ್ಟ್ರಪ್ರಶಸ್ತಿ ಪಡೆದಿರುವುದು ಇಡೀ ಕನ್ನಡ ಜನತೆಗೆ ಅವಿಸ್ಮರಣಿಯ ಕ್ಷಣವಾಗಿದೆ ಎಂದರೆ ಖಂಡಿತ ತಪ್ಪಾಗಲಾರದು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries