HEALTH TIPS

ಸದಸ್ಯನ ಚಿಕಿತ್ಸೆಗೆ ಕ್ಯಾಂಪ್ಕೋ ಧನಸಹಾಯ ಹಸ್ತಾಂತರ

ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ ಶಂಕರನಾರಾಯಣ ಭಟ್ ಕೆ ಪರ್ತಜೆ ಅವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಯಿತು. 

ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ 50000 ರೂ. ಚೆಕ್‍ನ್ನು ಅವರಿಗೆ ಹಸ್ತಾಂತರಿಸಿದರು. ಕಳೆದ ಕೆಲವು ವರ್ಷಗಳಿಂದ ಕ್ಯಾಂಪ್ಕೋ ಸಂಸ್ಥೆಯು ಸದಸ್ಯರ ಆರೋಗ್ಯದತ್ತ ಗಮನಹರಿಸಿ ಈ ಕಾರ್ಯವನ್ನುಕೈಗೊಂಡಿರುವುದು ಕೃಷಿಕರಿಗೆ ಆಶಾದಾಯಕವಾಗಿದೆ. ಈಗಾಗಲೇ ಅನೇಕ ಸದಸ್ಯರ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಗಿದೆ. 

ಪೆರ್ಲ ಸಮೀಪದ ಪರ್ತಜೆ ಮನೆಯಲ್ಲಿ ಚೆಕ್ ಹಸ್ತಾಂತರದ ಸಂದರ್ಭ ಸಂಸ್ಥೆಯ ನಿರ್ದೇಶಕ ಪದ್ಮರಾಜ ಪಟ್ಟಾಜೆ, ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ ಹಾಗೂ ಬದಿಯಡ್ಕ ಶಾಖೆಯ  ವ್ಯವಸ್ಥಾಪಕ ಶ್ಯಾಂಪ್ರಶಾಂತ ಬಿ ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries