HEALTH TIPS

ನವೀಕರಣ: ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶಿವಾರ್ಪಣಂ ಶ್ರಮದಾನ ಆರಂಭ

ಬದಿಯಡ್ಕ: ದೇವಸ್ಥಾನಗಳಲ್ಲಿ ನಾವು ಮಾಡುವ ಶ್ರಮದಾನವು ಒಂದು ಶ್ರೇಷ್ಠ ಸೇವೆ ಎಂದು ಪರಿಗಣಿಸ ಬೇಕು. ರಾಮಸೇತುವೆ ಸಂದರ್ಭದಲ್ಲಿ ಅಳಿಲು ಮಾಡಿದ ಸೇವೆಯಂತೆ ಸೇವಾ ಮನೋಭಾವದ ಮೂಲ ನಮ್ಮ ದೇವಾಲಯಗಳು. ಭಕ್ತಿ, ಶ್ರದ್ಧೆ, ಶ್ರಮೆವೇ ಬಂಡವಾಳ ಎಂದು ಸಾಮಾಜಿಕ ನೇತಾರ  ಪತ್ತಡ್ಕ ರಾಧಾಕೃಷ್ಣ ಭಟ್ ಹೇಳಿದರು.

ಏತಡ್ಕ ಶ್ರೀಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ  ಶಿವಾರ್ಪಣಂ ಶ್ರಮದಾನ ಮೊದಲ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡಿದರು.


 ಹಂಚು ಒಂದನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ  ವೈ.ಶಾಮ ಭಟ್ಟರಿಗೆ ನೀಡುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು.

 ವೇದಿಕೆಯಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ವೈ.ಶಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸ್ಥಳೀಯ ಮುಖಂಡೆ ಲಾವಣ್ಯ , ಶಶಿಕಲಾ             ಈಳಂತೋಡಿ , ಸಮಿತಿಯ ಉಪಾಧ್ಯಕ್ಷ  ಬಾಲಕೃಷ್ಣ ಕೆ.ಕೆ, ಖಜಾಂಜಿ ವೈ.ವಿ.ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಸಮಿತಿಯ ಸಂಯೋಜಕರಲ್ಲೊಬ್ಬರಾದ  ಚಂದ್ರಶೇಖರ ಏತಡ್ಕ  ನಿರೂಪಿಸಿ, ವಂದಿಸಿದರು. ಸ್ಥಳೀಯ ಅನೇಕ ಭಗವದ್ಭಕ್ತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries