HEALTH TIPS

ತ್ರಿಪುರ | ದುರ್ಗಾಪೂಜೆ ದೇಣಿಗೆ ವಿಚಾರದಲ್ಲಿ ಕೋಮು ಗಲಭೆ: ಒಬ್ಬ ಸಾವು

ಗುವಾಹಟಿ: ದುರ್ಗಾಪೂಜೆಗೆ ದೇಣಿಗೆ ನೀಡುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಭಾನುವಾರ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಉತ್ತರ ತ್ರಿಪುರಾ ಜಿಲ್ಲೆಯ ಕದಾಮತಲ್‌ ಗ್ರಾಮದಲ್ಲಿ ಸಂಘರ್ಷ ಉಂಟಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಆಕ್ರೋಶಗೊಂಡ ಜನರು ಅಂಗಡಿ ಹಾಗೂ ಮನೆಗಳಿಗೆ ಬೆಂಕಿ ಹಚ್ಚಲು ಮುಂದಾದರು.

ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಸೋಮವಾರ ಬೆಳಿಗ್ಗೆ ವೇಳೆಗೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.

'ಸಾವಿನ ನಿಖರ ಕಾರಣ ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

'ದುರ್ಗಾ ಪೂಜೆ ನಡೆಸಲು ದೇಣಿಗೆ ನೀಡುವಂತೆ ಒಂದು ಗುಂಪು ಬೇಡಿಕೆ ಇಟ್ಟಿತ್ತು. ಇದಕ್ಕೆ ಕೆಲವರು ನಿರಾಕರಿಸಿದರು. ಇದರಿಂದ ಸಿಟ್ಟಿಗೆದ್ದ ಎರಡು ಧರ್ಮಕ್ಕೆ ಸೇರಿದ ಗುಂಪುಗಳು ಹಲವು ಮನೆಗಳು, ಅಂಗಡಿಗೆ ಬೆಂಕಿ ಹಚ್ಚಲು ಆರಂಭಿಸಿದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು' ಎಂದು ಮೂಲಗಳು ತಿಳಿಸಿವೆ.

'ಘಟನೆ ಬಳಿಕ ಐದು ಮಂದಿ ಗುಂಪು ಸೇರದಂತೆ ಜಿಲ್ಲೆಯಲ್ಲಿ ನಿಯಂತ್ರಣ ಹೇರಲಾಗಿದ್ದು, ಪರಿಸ್ಥಿತಿ ಸುಧಾರಿಸುವವರೆಗೂ ಈ ನಿಯಂತ್ರಣ ಮುಂದುವರಿಯಲಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries