HEALTH TIPS

ಸರ್ಪಂಗಳ ನಿವಾಸಿ ಮೃತದೇಹ ಕಬಕ ರೈಲ್ವೆ ಹಳಿಯಲ್ಲಿ ಪತ್ತೆ

ಪೆರ್ಲ ಪೆರ್ಲ ಸಮೀಪದ ಸರ್ಪಂಗಳ ನಿವಾಸಿ, ಸೆಂಟ್ರಿಂಗ್ ಕಾರ್ಮಿಕ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (46) ಎಂಬವರ ಮೃತದೇಹ ಪುತ್ತೂರಿನ ಕಬಕ ಸನಿಹ ರೈಲು ಹಳಿಯಲ್ಲಿ ಗುರುವಾರ  ಪತ್ತೆಯಾಗಿದೆ. 

ಸೆಂಟ್ರಿಂಗ್ ಕಾರ್ಮಿಕರಾದ ಇವರು ಪುತ್ತೂರು ಸಮೀಪದ ಕಬಕ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಬುಧವಾರ ಬೆಳಗ್ಗೆ ಕಬಕದ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಕಬಕ  ಸ್ಟೇಶನ್ ವ್ಯಾಪ್ತಿಯ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿತ್ತು. ಬುಧವಾರ ರಾತ್ರಿ ಹಳಿ ದಾಟುವ ಮಧ್ಯೆ ರೈಲು ಡಿಕ್ಕಿಯಾಗಿರಬೇಕೆಂದು ಸಂಶಯಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾಲು ತುಂಡಾಗಿದ್ದು ರಾತ್ರಿ ವೇಳೆ ಯಾರ ಗಮನಕ್ಕೂ ಬಾರದೆ ಅತೀವ ರಕ್ತಸ್ರಾವದಿಂದ ವ್ಯಕ್ತಿ ಮೃತಪಟ್ಟಿರಬೇಕೆಂದು   ಸಂಶಯಿಸಲಾಗಿದೆ.    



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries