ಕಾಸರಗೋಡು: ಯಕ್ಷಗಾನ ಪ್ರಧಾನ ಕೇಂದ್ರವಾದ ಕೂಡ್ಲಿನ ಪಾಯಿಚ್ಚಾಲು ಪ್ರದೇಶದ ಸಮಾನಮನಸ್ಕರೆಲ್ಲರು ಒಟ್ಟು ಸೇರಿ ಸ್ಥಾಪಿಸಿದ ಸಂಘಟನೆ ಸ್ಕಂದ ಯಕ್ಷಗಾನ ಕೇಂದ್ರ. ಕಳೆದ ಎರಡು ವರ್ಷಗಳಿಂದ ಯಕ್ಷಗಾನ ನಾಟ್ಯವನ್ನು ಗುರುಗಳಾದ ರಂಜಿತ್ ಗೋಳಿಯಡ್ಕ ಇವರಿಂದ ಅಭ್ಯಾಸ ಮಾಡುತ್ತಿದ್ದು ಇಂದು ಅದರ ರಂಗಪ್ರವೇಶ ನಡೆಯುತ್ತಿದೆ.
ಕಾರ್ಯಕ್ರಮವನ್ನು ಮಧೂರು ಕ್ಷೇತ್ರದ ಪ್ರಧಾನ ಅರ್ಚಕÀ ಶ್ರೀಕೃಷ್ಣ ಉಪಾದ್ಯಾಯರು ಉದ್ಘಾಟಿಸುವರು. ಚಲನಚಿತ್ರನಟ, ರಂಗ ನಿರ್ದೇಶಕ ಕಾಸರಗೋಡು ಚಿನ್ನ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ, ಕೇಂದ್ರದ ಲಾಂಛನವನ್ನು ಕುತ್ಯಾಳ ಶ್ರೀಗೋಪಾಲಕೃಷ್ಣ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಕೆ.ಜಿ ಶಾನುಭೋಗ್ ಬಿಡುಗಡೆಗೊಳಿಸುವರು. ಶೇಷವನ ಕ್ಷೇತ್ರದ ಆಡಳಿತ ಮೊಕ್ತೇಸರ ವೇಣುಗೋಪಾಲ, ಅನುವಂಶಿಕ ಮೊಕ್ತೇಸರ ಸದಾಶಿವ, ಕೂಡ್ಲು ಮೇಳದ ವ್ಯವಸ್ಥಾಪಕ ರವಿರಾಜ ಅಡಿಗ ಶುಭಹಾರೈಸುವರು. ಸಮಾರಂಭದ ಅಧ್ಯಕ್ಷತೆಯನ್ನು ಕೇಂದ್ರದ ಅಧ್ಯಕ್ಷ ಕಿರಣ್ ಪ್ರಸಾದ್ ಕೂಡ್ಲು ವಹಿಸುವರು. ಈ ಸಂದರ್ಭದಲ್ಲಿ ನಾಟ್ಯಗುರುಗಳಾದ ರಂಜಿತ್ ಗೋಳಿಯಡ್ಕ ಇವರಿಗೆ ಗುರುವಂದನೆ ಸಲ್ಲಿಸಲಾಗುವುದು. ಬಳಿಕ ಕೇಂದ್ರದ ವಿದ್ಯಾರ್ಥಿಗಳೀಮದ ಪ್ರಮೀಳಾರ್ಜುನ-ಷಣ್ಮಖ ವಿಜಯ ಎಂಬ ಯಕ್ಷಗಾನ ನಡೆಯಲಿದೆ. ಎಲ್ಲಾ ಯಕ್ಷಗಾನ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ಉದಯೋನ್ಮಕ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.