HEALTH TIPS

ಬಾಂಬ್ ಬೆದರಿಕೆ: ಅಯೋಧ್ಯೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

 ವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂದು (ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.

ವಿಮಾನದಲ್ಲಿ 130 ಪ್ರಯಾಣಿಕರಿದ್ದು, ಸುರಕ್ಷಿತವಾಗಿದ್ದಾರೆ.

ಸಾಮಾಜಿಕ ಜಾಲತಾಣ 'ಎಕ್ಸ್' ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಮುಂಬೈನಿಂದ ಹೊರಡಬೇಕಿದ್ದ ಮೂರು ಅಂತರರಾಷ್ಟ್ರೀಯ ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಬಂದಿತ್ತು. ಅದರಲ್ಲಿ ನ್ಯೂಯಾರ್ಕ್‌ಗೆ ಸಂಚರಿಸಬೇಕಿದ್ದ ಏರ್‌ ಇಂಡಿಯಾ ವಿಮಾನವು ನವದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

'ಭದ್ರತಾ ತಪಾಸಣೆಯನ್ನು ನಡೆಸಲಾಗಿದ್ದು, ವಿಮಾನಗಳೊಳಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ' ಎಂದು ಪೊಲೀಸರು ತಿಳಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries