HEALTH TIPS

ನ್ಯಾಷನಲ್ ಕಾನ್ಫರೆನ್ಸ್ ನಾಶಕ್ಕೆ ಯತ್ನಿಸಿದವರೇ ನಿರ್ನಾಮವಾದರು: ಒಮರ್‌ ಅಬ್ದುಲ್ಲಾ

        ಬುದ್ಗಾಮ್‌: ಕಳೆದ ಐದು ವರ್ಷಗಳಿಂದ ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಪಕ್ಷವನ್ನು ನಾಶಪಡಿಸಲು ಯತ್ನಿಸಿದವರೇ ಈ ಬಾರಿಯ ಚುನಾವಣೆಯಲ್ಲಿ ನಿರ್ನಾಮವಾದರು ಎಂದು ಪಕ್ಷದ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.

         ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಒಮರ್‌ ಅವರು, ಕ್ರಮವಾಗಿ ಗಂಡೇರ್‌ಬಲ್‌ನಲ್ಲಿ 10 ಸಾವಿರ ಮತ್ತು ಬುದ್ಗಾಮ್‌ ಕ್ಷೇತ್ರದಲ್ಲಿ 18 ಸಾವಿರ ಮತಗಳ ಅಂತರದಲ್ಲಿ ಪಿಡಿಪಿ ಅಭ್ಯರ್ಥಿಗಳ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.

             ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮ ಪಕ್ಷವನ್ನು ನಾಶಪಡಿಸಲು ಹಲವು ಇತರ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಹುಟ್ಟಿಕೊಂಡವು. ಆದರೆ ದೇವರ ದಯೆ, ನಮ್ಮ ಪಕ್ಷವನ್ನು ನಾಶ ಮಾಡುವ ಹಾದಿಯಲ್ಲಿ ಅವರೇ ನಿರ್ನಾಮವಾದರು' ಎಂದು ಹೇಳಿದ್ದಾರೆ.

           'ನನಗೆ ಮತಚಲಾಯಿಸಿದ ಬುಡ್ಗಾಮ್‌ ಕ್ಷೇತ್ರ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಮತ್ತೊಮ್ಮೆ ಜಮ್ಮು- ಕಾಶ್ಮೀರದ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಈ ಫಲಿತಾಂಶ ಪಕ್ಷದ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ' ಎಂದು ಸಂತಸ ವ್ಯಕ್ತಪಡಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries