HEALTH TIPS

ಅಧಿಕಾರಿಗಳನ್ನು ಬಿಡದ ಸರ್ಕಾರ; ಮುಖ್ಯಮಂತ್ರಿ ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದ ರಾಜ್ಯಪಾಲರು

ತಿರುವನಂತಪುರಂ: ಮುಖ್ಯಮಂತ್ರಿ ಮಲಪ್ಪುರಂ ಹೇಳಿಕೆ, ಪಿ.ವಿ. ಅನ್ವರ್ ಠಿಔನ್ ಹ್ಯಾಕ್ ಆರೋಪದ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ಸೂಚಿಸಿದ್ದರೂ ಇಬ್ಬರೂ ಹಾಜರಾಗಿರಲಿಲ್ಲ.

ರಾಜ್ಯಪಾಲರ ಪ್ರಸ್ತಾವನೆಗೆ ಒಪ್ಪಿಗೆ ನೀಡಬಾರದು ಎಂಬ ನಿಲುವನ್ನು ಸರ್ಕಾರ ತೆಗೆದುಕೊಂಡಾಗ ಅಧಿಕಾರಿಗಳು ಹಾಜರಾಗಿಲ್ಲ. ಸರ್ಕಾರಕ್ಕೆ ಮಾಹಿತಿ ನೀಡದೆ ಅಧಿಕಾರಿಗಳನ್ನು ಕರೆಸುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ ಎಂದು ಮುಖ್ಯಮಂತ್ರಿಗಳು ನಿನ್ನೆ ಬೆಳಗ್ಗೆ ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಸಾಂವಿಧಾನಿಕ ಬಾಧ್ಯತೆ ಮೇರೆಗೆ ಪತ್ರ ನೀಡಿದ್ದು, ಅಧಿಕಾರಿಗಳು ಹಾಜರಿರಬೇಕು ಎಂದು ಸಂಜೆ ಮತ್ತೆ ಮುಖ್ಯಮಂತ್ರಿಗಳಿಗೆ ಪತ್ರ ನೀಡಿದರು. ಅಧಿಕಾರಿಗಳು ಹಾಜರಾಗದಂತೆ ಸೂಚಿಸಿದ್ದ ಮುಖ್ಯಮಂತ್ರಿಗಳ ವಿರುದ್ಧವೂ ರಾಜ್ಯಪಾಲರು ಪತ್ರದಲ್ಲಿ ಟೀಕಿಸಿದ್ದಾರೆ.

ನಿನ್ನೆ ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ರಾಜಭವನಕ್ಕೆ ಬಂದು ವಿವರಣೆ ನೀಡಬೇಕು ಎಂದು ರಾಜ್ಯಪಾಲರು ಆಗ್ರಹಿಸಿದ್ದರು. ಪತ್ರದಲ್ಲಿ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿ ಶಾರದಾ ಮುರಳೀಧರನ್ ಅವರಿಗೆ ಡಿಜಿಪಿ ಶೇಖ್ ದರ್ವೇಶ್ ಸಾಹಿಬ್ ಅವರನ್ನು ಕರೆತರುವಂತೆ ಸೂಚಿಸಿದ್ದಾರೆ.

ಮಲಪ್ಪುರಂನಲ್ಲಿ ಚಿನ್ನ ಕಳ್ಳಸಾಗಣೆ ಮತ್ತು ಹವಾಲಾ ವಹಿವಾಟಿನ ಹಣವನ್ನು ದೇಶವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂಬ ಮುಖ್ಯಮಂತ್ರಿಗಳ ಹೇಳಿಕೆಯು ರಾಜ್ಯಪಾಲರನ್ನು ಮಧ್ಯಪ್ರವೇಶಿಸಲು ಪ್ರೇರೇಪಿಸಿತು. ಪಿ.ವಿ. ಅನ್ವರ್ ಅವರ ಪೋನ್ ಹ್ಯಾಕಿಂಗ್ ಆರೋಪವೂ ರಾಜ್ಯಪಾಲರ ಪತ್ರದಲ್ಲಿತ್ತು. ಎರಡೂ ವಿಷಯಗಳ ಬಗ್ಗೆ ರಾಜ್ಯಪಾಲರು ಸರ್ಕಾರದಿಂದ ವರದಿ ಕೇಳಿದ್ದರೂ ನೀಡಿರಲಿಲ್ಲ. ಮೂರು ವಾರಗಳ ಹಿಂದೆ ರಾಜ್ಯಪಾಲರು ಪೋನ್ ಹ್ಯಾಕಿಂಗ್ ವಿಚಾರವಾಗಿ ತುರ್ತು ವರದಿ ನೀಡುವಂತೆ ಸರ್ಕಾರಕ್ಕೆ ಪತ್ರ ಕಳುಹಿಸಿದ್ದರು. ನಾಲ್ಕು ದಿನಗಳ ಹಿಂದೆ ಮಲಪ್ಪುರಂ ಉಲ್ಲೇಖದ ಕುರಿತು ರಾಜ್ಯಪಾಲರು ಮುಖ್ಯಮಂತ್ರಿಗೆ ಪತ್ರ ಕಳುಹಿಸಿದ್ದರು.

ಇವೆರಡÀಕ್ಕೂ ಉತ್ತರ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ರಾಜ್ಯಪಾಲರು ಅಧಿಕಾರಿಗಳಿಗೆ ಹಾಜರಾಗುವಂತೆ ಸೂಚಿಸಿದರು. ಆದರೆ ರಾಜ್ಯಪಾಲರ ಕ್ರಮ ಕಾನೂನು ಬಾಹಿರ ಎಂದು ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಪತ್ರವೊಂದನ್ನು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಮುಖ್ಯಮಂತ್ರಿಗೆ ಮತ್ತೊಮ್ಮೆ ಪತ್ರ ಕಳುಹಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries