HEALTH TIPS

ಆತ್ಮಹತ್ಯೆಗೆ ಯತ್ನಿಸಿದ ಯುವಕನಿಗೆ ಕ್ಲಪ್ತ ಸಮಯಕ್ಕೆ ಚಿಕಿತ್ಸೆ ದೊರೆಯದ ಪ್ರಕರಣ: ದೂರು ದಾಖಲಿಸಿದ ಮಾನವ ಹಕ್ಕುಗಳ ಆಯೋಗ

ತಿರುವನಂತಪುರ: ಪೂಜಾಪುರದಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ವರಾಂಡದಿಂದ ತುರ್ತು ಚಿಕಿತ್ಸಾ ವಿಭಾಗಕ್ಕೆ ವರ್ಗಾಯಿಸಲು ಟ್ರಾಲಿ ಹಾಗೂ ಸಿಬ್ಬಂದಿ ಸಕಾಲಕ್ಕೆ ಬಾರದೆ ದೂರಿನ ಮೇರೆಗೆ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿದೆ.

ಕರಕುಳಂ ಮೂಲದ ಬೈಜು ಎಂಬಾತನ ಮೈಮೇಲೆಲ್ಲ ಸುಟ್ಟಗಾಯಗಳಾಗಿದ್ದು ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸಿದೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಪೂಜಾಪುರ ಮಹಿಳಾ ಮಂದಿರದ ಎದುರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೌಟುಂಬಿಕ ಸಮಸ್ಯೆಗಳಿಂದ ಆತ್ಮಹತ್ಯೆಗೆ ಯತ್ನಿಸಲಾಗಿದೆ.

ಬೈಜು ಅವರ ಪತ್ನಿ ಐದು ತಿಂಗಳಿನಿಂದ ಪೂಜಾಪುರ ಮಹಿಳಾ ಮಂದಿರದಲ್ಲಿ ವಾಸವಾಗಿದ್ದಾರೆ. ಪತ್ನಿಯನ್ನು ಭೇಟಿಯಾಗಲು ಇಬ್ಬರು ಮಕ್ಕಳೊಂದಿಗೆ ಇಲ್ಲಿಗೆ ಬಂದಾಗ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಡುರಸ್ತೆಯಲ್ಲೇ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಗಮನಿಸಿ ಸ್ಥಳೀಯರು ದೌಡಾಯಿಸಿದರು. ಬಳಿಕ ಆ್ಯಂಬುಲೆನ್ಸ್ ನಲ್ಲಿ ಮೆಡಿಕಲ್ ಕಾಲೇಜಿಗೆ ಕರೆದೊಯ್ದರೂ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲು ಟ್ರಾಲಿ, ಸ್ಟ್ರೆಚರ್ ಸಿಗಲಿಲ್ಲ. ಆ ಸಮಯದಲ್ಲಿ ಪರಿಚಾರಕರೂ ಇದ್ದಿರಲಿಲ್ಲ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries