HEALTH TIPS

ಕೊಂಡೆವೂರು ಮಠದ ನವರಾತ್ರಿ ಮಹೋತ್ಸವ ಸಂಪನ್ನ

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದಲ್ಲಿ ನವರಾತ್ರಿ ಮಹೋತ್ಸವ ವಿಜಯದಶಮಿಯಂದು ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ,  ವಿವಿಧ ವೈದಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

ಪ್ರಾತ:ಕಾಲ ಶ್ರೀದೇವರಿಗೆ 108 ಸೀಯಾಳಾಭಿಷೇಕ, ಬೆಳಗ್ಗಿನ ಪೂಜೆಯು ನಂತರ ತೆನೆಪೂಜೆ, ವಿದ್ಯಾರಂಭ, ವಾಹನಪೂಜೆಗಳು ನಡೆದವು.  ಬಳಿಕ ಕು.ಗಾಯತ್ರಿ ಮತ್ತು ಕು. ಶ್ರಾವಣ್ಯ ಕೊಂಡೆವೂರು ಇವರ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಾಗೂ ಸವಿಜೀವನಂ ನೃತ್ಯ ಕಲಾಕ್ಷೇತ್ರ ಕೊಂಡೆವೂರು ಇದರ ವಿದ್ಯಾರ್ಥಿಗಳಿಂದ ವಿದುಷಿ ಸವಿತಾ ಜೀವನ್ ಇವರ ನಿರ್ದೇಶನದಲ್ಲಿ ಭರತನಾಟ್ಯ  ಕಾರ್ಯಕ್ರಮ ವೈವಿಧ್ಯ ಪ್ರದರ್ಶನಗೊಂಡಿತು. 

ಮಧ್ಯಾಹ್ನ ಪೂಜೆಯ ನಂತರ  ಶ್ರೀ ಮಠದ ನಕ್ಷತ್ರವನದಲ್ಲಿರುವ ಆನಂದತೀರ್ಥ ಪುಷ್ಕರಿಣಿಯಲ್ಲಿ ಶ್ರೀ ಶಾರದಾ ವಿಸರ್ಜನೆ ಬಹಳ ವಿಜೃಂಭಣೆಯಿಂದ ನಡೆಯಿತು. ಬಳಿಕ ಪೂಜ್ಯರು ಭಕ್ತಾದಿಗಳಿಗೆ ಮಂಗಲಮಂತ್ರಾಕ್ಷತೆ ಅನುಗ್ರಹಿಸುವುದರೊಂದಿಗೆ ಕಾರ್ಯಕ್ರಮಗಳು ಸಂಪನ್ನಗೊಂಡವು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries