HEALTH TIPS

ಗಡಿಯಲ್ಲಿ ನುಸುಳುವಿಕೆ ಯತ್ನ: ಇಬ್ಬರು ಉಗ್ರರ ಹತ್ಯೆ

 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಿಕೆ ಯತ್ನವನ್ನು ವಿಫಲಗೊಳಿಸಿದ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ ಎಂದು ಸೇನೆ ಶನಿವಾರ ತಿಳಿಸಿದೆ.

ಗುಪ್ತಚರ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ ಎಂದು ಶ್ರೀನಗರ ತಳಹದಿಯ ಚಿನಾರ್ ಕಾರ್ಪ್ಸ್ ತಿಳಿಸಿದೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಮಟ್ಟ ಹಾಕಲಾಗಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.


ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ನೀಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries