ಬದಿಯಡ್ಕ: ನೀರ್ಚಾಲಿನಲ್ಲಿ ಸುಮಾರು 49 ವರ್ಷಗಳ ಹಿಂದೆ ಸ್ಥಾಪಿತವಾದ ಶ್ರೀ ಕುಮಾರ ಸ್ವಾಮಿ ಭಜನಾ ಮಂದಿರವನ್ನು ಪುನರ್ ನಿರ್ಮಿಸುವ ಸಲುವಾಗಿ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಬೆಳಗ್ಗೆ ಧನುರ್ಲಗ್ನ ಶುಭಮುಹೂರ್ತದಲ್ಲಿ ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯಹಸ್ತದಿಂದ ನೆರವೇರಿತು.
ಪುರೋಹಿತ ಕಿಳಿಂಗಾರು ವೇದಮೂರ್ತಿ ಶಿವಶಂಕರ ಭಟ್ ಅವರು ವೈದಿಕ ಹಾಗೂ ಶಿಲ್ಪಿಗಳಾದ ರಮೇಶ್ ಕಾರಂತ ಶಿಲ್ಪಶಾಸ್ತ್ರದ ನೇತೃತ್ವ ವಹಿಸಿದ್ದರು. ನಾಡಿನ ಗಣ್ಯರು, ಭಗವದ್ಭಕ್ತರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.