HEALTH TIPS

ಭ್ರಷ್ಟಾಚಾರ ಪ್ರಕರಣ: ಟಿಎಂಸಿ ಯುವ ನಾಯಕ ಬಂಧನ

 ವದೆಹಲಿ: ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಜತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಯುವ ನಾಯಕ ಆಶಿಶ್‌ ಪಾಂಡೆ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.

ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಲೇಜಿನ ಮಾಜಿ ಪ್ರಾಚಾರ್ಯ ಸಂದೀಪ್‌ ಘೋಷ್‌ ಅವರ ನಿಕಟವರ್ತಿಯಾದ ಆಶಿಶ್‌ ಪಾಂಡೆ ಅವರನ್ನು ಸಿಬಿಐ ಸೆಪ್ಟೆಂಬರ್‌ 30ರಂದು ವಿಚಾರಣೆಗೆ ಒಳಪಡಿಸಿತ್ತು.

ಘೋಷ್‌ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸೆಪ್ಟೆಂಬರ್‌ 2ರಂದು ಬಂಧಿಸಿತ್ತು. ಬಳಿಕ ಆರ್‌.ಜಿ.ಕರ್‌ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಆಗಸ್ಟ್‌ 9ರಂದು ನಡೆದಿದ್ದ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲೂ ಅವರನ್ನು ವಶಕ್ಕೆ ಪಡೆದಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries