ಕಾಸರಗೋಡು : ನವೀಕರಿಸಲಾದ ಕಾಸರಗೋಡು ಪ್ರೆಸ್ಕ್ಲಬ್ನ ಕಟ್ಟಡದ ಉದ್ಘಾಟನೆಯನ್ನು ಶನಿವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ಲೈನ್ ಮೂಲಕ ಉದ್ಘಾಟಿಸಿದರು. ಲೋಕೋಪಯೋಗಿ ಖಾತೆ ಸಚಿವ ಪಿ.ಎ.ಮುಹಮ್ಮದ್ ರಿಯಾಜ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎನ್.ಎ.ನೆಲ್ಲಿಕುನ್ನು, ಇ ಸಿ.ಎಚ್.ಕುಂಜಂಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ, ನಗರಸಭಾ ಪ್ರತಿಪಕ್ಷ ಮುಖಂಡ ರಮೇಶ್, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಅದ್ಯಕ್ಷೆ ಎ.ವಿ ವಿನೀತಾ, ಕಾರ್ಯದರ್ಶಿ ಆರ್.ಕಿರಣ್ ಬಾಬು, ಮಾಧ್ಯಮ ಅಕಾಡಮಿಯ ಸುಭಾಷ್ ಇ, ಕಾಸರಗೋಡು ಜಿಪಂ ಉಪಾಧ್ಯಕ್ಷ ಶಾನವಾಜ್ ಪಾದೂರು, ವರ್ತಾಧಿಕಾರಿ ಎಂ.ಮಧುಸೂಧನನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಲಾಫಲಕವನ್ನು ಶಾಸಕ ಎನ್.ಎ ನೆಲ್ಲಿಕುನ್ನು ಅನಾವರಣಗೊಳಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಈ ಸಂದರ್ಭ ಶಿರೂರ್ನಲ್ಲಿ ಲಾರಿ ಚಾಲಕ ಅರ್ಜುನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಮಾಧ್ಯಮದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶೈಜು ಪಿಲಾತ್ತರ ಕಾರ್ಯಕ್ರಮ ನಿರೂಪಿಸಿದರು. ಕೆ.ವಿ ಪದ್ಮೇಶ್ ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಮಾಧ್ಯಮ ವಿಚಾರ ಸಂಕಿರಣದಲ್ಲಿ ಹಿರಿಯ ಪತ್ರಕರ್ತ ಪಿ.ವಿ ಶಶೀಂದ್ರನ್ ತರಗತಿ ನಡೆಸಿದರು. ಪತ್ರಕರ್ತ ವಿನೋದ್ ಪಾಯಂ ಮೋಡರೇಟರ್ ಆಗಿ ಸಹಕರಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ, ಪ್ರದೀಪ್ ನಾರಾಯಣ್, ನಹಾಸ್ ಉಪಸ್ಥಿತರಿದ್ದರು.