ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಕನ್ನಡ ವಾರ್ತಾ ವಾಚನ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ರಕ್ಷಾ ತೃತೀಯ ಸ್ಥಾನಗಳಿಸಿದ್ದಾಳೆ. ಸೂರಂಬೈಲು ಪೆರ್ಣೆ ನಿವಾಸಿ ಬಾಲಕೃಷ್ಣ – ಸಾವಿತ್ರಿ ದಂಪತಿ ಪುತ್ರಿಯಾದ ರಕ್ಷಾಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.