HEALTH TIPS

ಸೋನಮ್‌ ವಾಂಗ್ಚುಕ್‌ ಮತ್ತೆ ಪೊಲೀಸ್‌ ವಶಕ್ಕೆ

        ವದೆಹಲಿ: ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌ ಮತ್ತು ಅವರೊಂದಿಗೆ ಬಂದಿದ್ದ ಇತರ 150 ಜನರನ್ನು ದೆಹಲಿ ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.

          ಸಂವಿಧಾನದ 6ನೇ ಪರಿಚ್ಛೇದಕ್ಕೆ ಲಡಾಖ್‌ ಸೇರಿಸುವಂತೆ ಒತ್ತಾಯಿಸಿ ಲೇಹ್‌ನಿಂದ ಪಾದಯಾತ್ರೆ ಮೂಲಕ ದೆಹಲಿ ತಲು‍ಪಿದ್ದ ವಾಂಗ್ಚುಕ್‌ ಮತ್ತು ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ 150 ಜನರನ್ನು ದೆಹಲಿ ಪೊಲೀಸರು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದರು.

             'ನಿಷೇಧಾಜ್ಞೆ ಜಾರಿಯಲ್ಲಿದ್ದು ಪಾದಯಾತ್ರೆ ನಿಲ್ಲಿಸಿ ಮರಳುವಂತೆ ವಾಂಗ್ಚುಕ್‌ ಮತ್ತು ಇತರ ಬಂಧಿತ ಲಡಾಖಿಗಳಿಗೆ ತಿಳಿಸಲಾಯಿತು. ಆದರೆ, ಅವರು ಅದನ್ನು ಒಪ್ಪಲಿಲ್ಲ. ಮಧ್ಯ ದೆಹಲಿ ಕಡೆಗೆ ಪಾದಯಾತ್ರೆ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಆದ್ದರಿಂದ ಮತ್ತೆ ಬಂಧಿಸಬೇಕಾಯಿತು' ಎಂದು ಹಿರಿಯ ಪೊಲೀಸರ್ ಅಧಿಕಾರಿಯೊಬ್ಬರು ಪಿಟಿಐಗೆ ಹೇಳಿದ್ದಾರೆ.

         ವಾಂಗ್ಚುಕ್‌ ಅವರನ್ನು ಬವಾನಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದ್ದು, ಇತರರನ್ನು ನರೇಲಾ ಇಂಡಸ್ಟ್ರಿಯಲ್ ಏರಿಯಾ, ಅಲಿಪುರ್ ಮತ್ತು ಕಾಂಝವಾಲಾ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

             'ಗಾಂಧಿ ಜಯಂತಿ ದಿನವಾದ ಇಂದು ದೆಹಲಿಯನ್ನು ತಲುಪಿ, ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂಬುವುದು ನಮ್ಮ ಉದ್ದೇಶವಾಗಿತ್ತು. ಆದರೆ ಅದಕ್ಕೂ ಅವಕಾಶ ನಿರಾಕರಿಸಲಾಗಿದೆ' ಎಂದು ಲೇಹ್‌ ಅಪೆಕ್ಸ್‌ ಬಾಡಿ ಸಂಯೋಜಕ ಜಿಗ್ಮತ್ ಪಾಲ್ಜೋರ್ ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries