HEALTH TIPS

ಮಹಾರಾಷ್ಟ್ರ | ಆರ್‌ಎಸ್‌ಎಸ್‌ ಪಥಸಂಚಲನ: ಪರಿಸ್ಥಿತಿ ಉದ್ವಿಗ್ನ

         ಮುಂಬೈ: ಮಹಾರಾಷ್ಟ್ರದ ರತ್ನಗಿರಿ ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪಥ ಸಂಚಲನ ನಡೆಯುತ್ತಿದ್ದ ವೇಳೆ ಅಲ್ಪಸಂಖ್ಯಾತರು ಘೋಷಣೆ ಕೂಗಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

        'ಕೊಂಕಣ್‌ ನಗರ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

          ಅಶಾಂತಿಗೆ ಕಾರಣವಾದ ಐವರನ್ನು ಗುರುತಿಸಲಾಗಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ' ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

         'ಪಥಸಂಚಲನದ ವೇಳೆ ವಿರುದ್ಧವಾದ ಘೋಷಣೆಗಳನ್ನು ಕೂಗುವ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಸಂಘಟನೆಯವರು ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ' ಎಂದು ಮಾಹಿತಿ ನೀಡಿದ್ದಾರೆ.

             'ಯಾವುದೇ ರೀತಿಯ ಹಿಂಸಾಚಾರ ನಡೆದಿಲ್ಲ, ಆದರೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧದ ಪ್ರಾಥಮಿಕ ವರದಿಯನ್ನು ನೀಡಬೇಕು ಎಂದು ಆಗ್ರಹಿಸಿ ಹಲವರು ಪೊಲೀಸ್‌ ಠಾಣೆಯ ಮುಂದೆ ಧರಣಿ ನಡೆಸಿದ್ದಾರೆ' ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries