HEALTH TIPS

ತಿರುಮಲ: ಬ್ರಹ್ಮೋತ್ಸವ

 ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ 9 ದಿನಗಳ ಬ್ರಹ್ಮೋತ್ಸವವು ಶುಕ್ರವಾರದಿಂದ ಆರಂಭವಾಗಲಿದೆ.

ಬ್ರಹ್ಮೋತ್ಸವವ ಅ.4ರಿಂದ 12ರವರೆಗೆ ನಡೆಯಲಿದ್ದು, ಈ ವೇಳೆ ದೇವಸ್ಥಾನಕ್ಕೆ ಪ್ರತಿ ದಿನ 2 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.

ಈ ಸಂದರ್ಭದಲ್ಲಿ ಶಿಷ್ಟಾಚಾರಕ್ಕೆ ಅನು‌ಗುಣವಾಗಿ ಕೆಲವು ಸೇವೆಗಳು, ಅಂಗ ಪ್ರದಕ್ಷಿಣೆ ಹಾಗೂ ವಿಐಪಿ ದರ್ಶನ ವ್ಯವಸ್ಥೆಯನ್ನು ರದ್ದು ಮಾಡಲಾಗುವುದು ಎಂದು 'ತಿರುಮಲ ತಿರುಪತಿ ದೇವಸ್ಥಾನಂ' (ಟಿಟಿಡಿ) ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಜೆ. ಶ್ಯಾಮಲ ರಾವ್‌, 'ಭಕ್ತರಿಗಾಗಿ 7 ಲಕ್ಷ ಲಾಡುಗಳನ್ನು ಈಗಾಗಲೇ ತಯಾರಿಸಲಾಗಿದೆ' ಎಂದರು.

ಅಲ್ಲದೇ 'ಭಕ್ತರ ನೆರವಿಗಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸ ಲಾಗುವುದು. 11.5 ಲಕ್ಷ ಜನರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸುಮಾರು 45,000 ಭಕ್ತರಿಗೆ ತಿರುಮಲದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ' ಎಂದು ಮಾಹಿತಿ ನೀಡಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries