ಮಂಜೇಶ್ವರ: ಇಲ್ಲಿನ ಮಂಜೇಶ್ವರ ಗೋವಿಂದ ಪೈ ಸರ್ಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ - ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಅಸೌಖ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಗೋವಿಂದ ಪೈ ಸರ್ಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾಗಿದ್ದಳು. ಕಳೆದ ಹಲವು ದಿನಗಳಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ರಾತ್ರಿ ಮೃತಪಟ್ಟಿದ್ದು , ವಿದ್ಯಾರ್ಥಿನಿಯ ಆಕಾಲಿಕ ಮರಣಕ್ಕೆ ಮಂಜೇಶ್ವರ ಗೋವಿಂದ ಪೈ ಕಾಲೇಜಿನ ಪ್ರಾಚಾರ್ಯರಾದ ಮುಹಮ್ಮದ್ ಅಲಿ ಪೆರ್ಲ, ಸಿನಿಯರ್ ಸುಪ್ರಡೆಂಟ್ ದಿನೇಶ್, ಕಾಲೇಜಿನ HOD, ಉಪನ್ಯಾಸಕರು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಅಪಾರ ಸಂತಾಪ ಸೂಚಿಸಿದ್ದಾರೆ ಅಕಾಲಿಕ ಮರಣ ಕಾಲೇಜು ನೌಕರರು ಹಾಗೂ ವಿದ್ಯಾರ್ಥಿಗಳನ್ನು ಹಾಗೂ ಮುಗು ಪ್ರದೇಶವಾಸಿಗಳನ್ನು ಶೋಕ ಸಾಗರದಲ್ಲಿ ಮುಳುಗುಸಿದೆ.
ಮಂಜೇಶ್ವರ ಸರ್ಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಅಸೌಖ್ಯದಿಂದ ಮ್ಮತ್ಯು
0
October 27, 2024
Tags