HEALTH TIPS

ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಒಲಿಂಪಿಕ್ಸ್ ಕ್ರೀಡಾಕೂಟ ಉದ್ಘಾಟನೆ

     ಬದಿಯಡ್ಕ: ಕುಂಬಳೆ ಉಪಜಿಲ್ಲಾ ಕೇರಳ ಶಾಲಾ ಒಲಿಂಪಿಕ್ಸ್ ನೀರ್ಚಾಲ್ ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಎಲ್.ಪಿ. ಶಾಲೆಯಲ್ಲಿ ಆರಂಭವಾಯಿತು. ನಿನ್ನೆ(ಅ.8)  ಬೆಳಗ್ಗೆ 10.30 ಕ್ಕೆ  ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಿದರು.


         ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷೆ  ಶಾಂತಾ.ಬಿ. ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಜಿಲ್ಲಾ ಪಂಚಾಯತಿ ಸದಸ್ಯೆ ಶೈಲಜಾ ಭಟ್, ಬದಿಯಡ್ಕ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಅಬ್ಬಾಸ್ ಎಂ., ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ., ಕಾಸರಗೋಡು ಬ್ಲಾಕ್ ಪಂಚಾಯತಿ ಸದಸ್ಯೆ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತಿ ಸದಸ್ಯೆ ಜಯಶ್ರೀ ಪಿ., ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸುಕುಮಾರ ಕುದ್ರೆಪ್ಪಾಡಿ, ಬದಿಯಡ್ಕ ಗ್ರಾಮ ಪಂಚಾಯತಿ ಪಿ.ಇ.ಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್.ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ., ಕುಂಬಳೆ ಉಪಜಿಲ್ಲಾ ಮಟ್ಟದ ವಿವಿಧ ಚಟುವಟಿಕೆಗಳ ಸಮಿತಿ ಸಂಚಾಲಕ ಸುರೇಂದ್ರನ್ ಎಂ.ವಿ., ಬದಿಯಡ್ಕ ಗ್ರಾಮ ಪಂಚಾಯತಿ ಸದಸ್ಯ ಶ್ಯಾಮಪ್ರಸಾದ್ ಮಾನ್ಯ, ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ., ಬದಿಯಡ್ಕ ಆರೋಗ್ಯ ಸೇವಾ ಕೇಂದ್ರದ ಹೆಲ್ತ್ ಇನ್ಸ್ಪೆಕ್ಟರ್ ರಾಜೇಶ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಮಾಲತಿ ವೈ., ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಜಯಕುಮಾರ್ ಪಿ., ಕುಂಬಳೆ ಉಪಜಿಲ್ಲಾ ದೈಹಿಕ ಶಿಕ್ಷಣ ಸಂಘಟನೆಯ ಕಾರ್ಯದರ್ಶಿ ಸಂತೋಷ್ ಪಿ.ಎಚ್ ಶುಭಾಶಂಸನೆಗೈದರು. 

          ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ.ಎಂ. ಸ್ವಾಗತಿಸಿ,  ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ ಎಂ.ಕೆ.ವಂದಿಸಿದರು. 

             ಅಕ್ಟೋಬರ್ 10 ರವರೆಗೆ ಶಾಲಾ ಮಕ್ಕಳ ವಿವಿಧ ಕ್ರೀಡಾ ಸ್ಪರ್ಧೆಗಳು ಶಾಲೆಯ ನೀರ್ಚಾಲ್ ಮತ್ತು ಮಲ್ಲಡ್ಕ ಮೈದಾನದಲ್ಲಿ ನಡೆಯಲಿದೆ. ಅಕ್ಟೋಬರ್ 10ರ ಗುರುವಾರ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries