HEALTH TIPS

ಮಹಾರಾಷ್ಟ್ರದಲ್ಲಿ ಸಿದ್ದಿಕಿ ಹತ್ಯೆ: ಹದಗೆಟ್ಟ ಕಾನೂನು-ಸುವ್ಯವಸ್ಥೆ; ರಾಹುಲ್ ಆರೋಪ

 ವದೆಹಲಿ: ಅಜಿತ್ ಪವಾರ್ ಬಣದ (ಎನ್‌ಸಿಪಿ) ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ (66) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ಘಟನೆಗೆ ಮಹಾರಾಷ್ಟ್ರ ಸರ್ಕಾರವೇ ಹೊಣೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಬಾಬಾ ಸಿದ್ದಿಕಿ ಅವರ ದುರ್ಮರಣ ಆಘಾತಕಾರಿ ಮತ್ತು ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ನಾನು ಅವರ ಕುಟುಂಬದೊಂದಿಗೆ ಇರುವೆ ಎಂದು ರಾಹುಲ್‌ ಗಾಂಧಿ ಸಂತಾಪ ವ್ಯಪ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.


ಬಾಂದ್ರಾದ ನಿರ್ಮಲ್ ನಗರದಲ್ಲಿ ಅವರ ಪುತ್ರನ ಕಚೇರಿ ಸಮೀಪ ಸಿದ್ದಿಕಿ ಮೇಲೆ ಶನಿವಾರ ರಾತ್ರಿ ಗುಂಡಿನ ದಾಳಿ ನಡೆದಿತ್ತು. ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಗುಂಡಿನ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries