HEALTH TIPS

ನವೀನ್ ಬಾಬು ಸಾವು ದುರದೃಷ್ಟಕರ; ರಾಜ್ಯದಿಂದ ವರದಿ ಕೇಳಲಾಗುವುದು: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್

ತಿರುವನಂತಪುರ: ಸಿಪಿಎಂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧಿಕಾರ ದುರುಪಯೋಗದಿಂದ ಎಡಿಎಂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದುರದೃಷ್ಟಕರ ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

ಈ ಬಗ್ಗೆ ಪೋಲೀಸರು ತನಿಖೆ ನಡೆಸಬೇಕು ಮತ್ತು ಅಗತ್ಯ ಬಿದ್ದರೆ ರಾಜ್ಯ ಸರ್ಕಾರದಿಂದ ವರದಿ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜ್ಯಪಾಲರು ತಿರುವನಂತಪುರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

ನವೀನ್ ಬಾಬು ಕುಟುಂಬದವರು ನೀಡಿರುವ ದೂರಿನ ಮೇರೆಗೆ ಪೋಲೀಸ್ ತನಿಖೆ ನಡೆಸಬೇಕು. ಮಾಹಿತಿ ಹೊರಬರಬೇಕಿದೆ. ಅಗತ್ಯ ಬಿದ್ದರೆ ರಾಜ್ಯದಿಂದ ವರದಿ ಕೇಳಲಾಗುವುದು. ತನ್ನ ಅವಧಿ ಮುಗಿದಿದ್ದು, ರಾಜ್ಯಪಾಲರನ್ನು ಬದಲಾಯಿಸುವ ನಿರ್ಧಾರವನ್ನು ರಾಷ್ಟ್ರಪತಿಗಳು ಕೈಗೊಳ್ಳಬೇಕಿದೆ ಎಂದರು. 

ಆರೀಫ್ ಮುಹಮ್ಮದ್ ಖಾನ್ ಅವರ ಅವಧಿ ಪೂರ್ಣಗೊಂಡ ನಂತರ ಅವರನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂಬ ಕೆಲವು ಸುದ್ದಿ  ಹೊರಬಿದ್ದಿದೆ. ಐದು ವರ್ಷಗಳ ನಂತರ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ನ ಲೆಫ್ಟಿನೆಂಟ್ ಗವರ್ನರ್ ಹಾಗೂ ನೌಕಾಪಡೆಯ ಮಾಜಿ ಮುಖ್ಯಸ್ಥರಾಗಿದ್ದ ಅಡ್ಮಿರಲ್ ದೇವೇಂದ್ರ ಕುಮಾರ್ ಜೋಶಿ ಅವರು ಕೇರಳದ ಉಸ್ತುವಾರಿಯನ್ನು ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries