HEALTH TIPS

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ತಿರಸ್ಕರಿಸಿದ ಭಾರತ

 ವದೆಹಲಿ: ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಕೆನಡಾದ ಆರೋಪಗಳನ್ನು ಭಾರತ ಇಂದು (ಮಂಗಳವಾರ) ತಳ್ಳಿ ಹಾಕಿದೆ.

ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತಕ್ಕೆ ಸಾಕ್ಷ್ಮಗಳನ್ನು ಹಂಚಿಕೊಳ್ಳಲಾಗಿದೆ ಎಂಬ ಕೆನಡಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ.

'ತನ್ನ ನೆಲದಲ್ಲಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆಗಳನ್ನು ನಡೆಸುವ ಚಟುವಟಿಕೆಗಳಲ್ಲಿ ಭಾರತ ತೊಡಗಿಸಿಕೊಂಡಿದೆ' ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪ ಮಾಡಿದ್ದರು. ಆದರೆ ಇದು ಸತ್ಯವಲ್ಲ ಎಂದು ಭಾರತ ತಿರುಗೇಟು ನೀಡಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಏಜೆಂಟರ ಪಾತ್ರ ಇರುವುದನ್ನು ಸಾಬೀತುಪಡಿಸುವ ನಂಬಲರ್ಹ ಪುರಾವೆಗಳನ್ನು ಒದಗಿಸಲಾಗಿದೆ ಎಂಬ ಕೆನಡಾದ ಅಧಿಕಾರಿಗಳ ಆರೋಪಗಳನ್ನು ಭಾರತ ನಿರಾಕರಿಸಿರುವುದಾಗಿ ಮೂಲಗಳು ತಿಳಿಸಿವೆ.

ಪತ್ರಿಕಾಗೋಷ್ಠಿಯಲ್ಲಿ ಅದೇ ಹಳೆಯ ಟ್ರುಡೊ, ಮತ್ತದೇ ಹಳೆಯ ಕಾರಣಗಳನ್ನು ನೀಡುತ್ತಿದ್ದರು ಎಂದು ಹೇಳಿವೆ.

ಕೆನಡಾದಲ್ಲಿರುವ ತನ್ನ ಹೈಕಮಿಷನರ್‌ ಅವರನ್ನು ಸೋಮವಾರ ಭಾರತ ವಾಪಸ್‌ ಕರೆಸಿಕೊಳ್ಳುವುದರೊಂದಿಗೆ ಉಭಯ ದೇಶಗಳ ನಡುವಣ ರಾಜತಾಂತ್ರಿಕ ಸಂಬಂಧದಲ್ಲಿ ಮತ್ತಷ್ಟು ಬಿರುಕು ಮೂಡಿತ್ತು. ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್‌ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಹೇಳಿತ್ತು. ಇದರ ಬೆನ್ನಲ್ಲೇ ಭಾರತ ಈ ನಿರ್ಧಾರ ತೆಗೆದುಕೊಂಡಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries