HEALTH TIPS

ಖಾದಿ ಮಂಡಳಿಯಿಂದ ರಸಪ್ರಶ್ನೆ ಸ್ಪರ್ಧೆ

ಖಾದಿ ಮಂಡಳಿಯು ಗಾಂಧೀಜಿಯವರ 155ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಗಾಂಧಿ ಜಯಂತಿ ಸಪ್ತಾಹವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. ಇದರ ಅಂಗವಾಗಿ ಅಕ್ಟೋಬರ್ 15 ರಂದು ಬೆಳಗ್ಗೆ 11ಕ್ಕೆ ಕಾಞಂಗಾಡ್ ಮಾವುಂಗಲ್ ನಲ್ಲಿರುವ ಕಾಸರಗೋಡು ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಛೇರಿಯಲ್ಲಿ  (8 ರಿಂದ 12 ನೇ) ತರಗತಿಗಳ ವಿದ್ಯಾರ್ಥಿಗಳಿಗೆ ಪ್ರೌಶಾಲೆ, ಹೈಯರ್ ಸೆಕೆಂಡರಿ ಆಧಾರದ ಮೇಲೆ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 'ಗಾಂಧೀಜಿ, ಖಾದಿ ಮತ್ತು ಸ್ವಾತಂತ್ರ್ಯ ಹೋರಾಟ' ಎಂಬ ವಿಷಯದ ಮೇಲೆ ಸ್ಪರ್ಧೆ ನಡೆಸಲಾಗುವುದು. 

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಆಸಕ್ತ ವಿದ್ಯಾರ್ಥಿಗಳು ಶಾಲಾ ಅಧಿಕಾರಿಗಳು ದೃಢೀಕರಿಸಿದ ಪತ್ರದ ಮೂಲಕ ಜಿಲ್ಲಾ ಖಾದಿ ಗ್ರಾಮೋದ್ಯೋಗ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ - 0467 2200585, 9895634134, 9961737413


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries