HEALTH TIPS

ಜೈಪುರ : RSS ಕಾರ್ಯಕರ್ತರ ಮೇಲೆ ಹಲ್ಲೆ: ಆರೋಪಿಗಳಿಗೆ ಸೇರಿದ ಕಟ್ಟಡ ನೆಲಸಮ

        ಜೈಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳಿಗೆ ಸೇರಿದ ಕಟ್ಟಡವನ್ನು ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವುದರಿಂದ ಅದರ ಒಂದು ಭಾಗವನ್ನು ನೆಲಸಮಗೊಳಿಸಲಾಗಿದೆ.

         ಜೈಪುರದ ಕರ್ಣಿ ವಿಹಾರ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಆಯೋಜಿಸಲಾಗಿದ್ದ ಶರದ್‌ ಪೂರ್ಣಿಮಾ ಕಾರ್ಯಕ್ರಮಕ್ಕೆ ನುಗ್ಗಿದ ಹಲವರು ಅಲ್ಲಿದ್ದ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಚಾಕು ಹಾಗೂ ಇತರ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸಿದ್ದರು. ಘಟನೆಯಲ್ಲಿ 10 ಜನ ಆರ್‌ಎಸ್‌ಎಸ್‌ ಕಾರ್ಯಕರ್ತರು ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿಗಳಾದ ನಸೀಬ್‌ ಚೌಧರಿ, ಅವರ ಪತ್ನಿ ನಿರ್ಮಲಾ ಹಾಗೂ ಮಗ ಭೀಶಮ್‌ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ.

          ನಸೀಬ್‌ ಚೌಧರಿಯು ದೇವಸ್ಥಾನದ ಜಮೀನಿನ ಒಂದು ಭಾಗವನ್ನು ಮತ್ತು ಉದ್ಯಾನವನ್ನು ಒತ್ತುವರಿ ಮಾಡಿಕೊಂಡು ಕಟ್ಟಡವೊಂದನ್ನು ನಿರ್ಮಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದರು.

ದೇವಸ್ಥಾನದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಬಳಿಕ ಜೈಪುರ ಅಭಿವೃದ್ಧಿ ಪ್ರಾಧಿಕಾರವು ಸ್ಥಳದಲ್ಲಿ ಪರಿಶೀಲನೆ ನಡೆಸಿತು. ಒತ್ತುವರಿ ಮಾಡಿರುವುದು ತಿಳಿದ ಬಳಿಕ 24 ಗಂಟೆಯೊಳಗೆ ಉತ್ತರಿಸುವಂತೆ ಚೌಧರಿಗೆ ನೋಟಿಸ್‌ ನೀಡಿತ್ತು. ಆದರೆ, ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣಕ್ಕೆ ಕಟ್ಟಡದ ಭಾಗವನ್ನು ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries