HEALTH TIPS

ಗೋಧ್ರಾ ರೈಲು ದುರಂತ ಆಧಾರಿತ ಸಿನಿಮಾಗೆ ಮಧ್ಯಪ್ರದೇಶ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ

ಭೋಪಾಲ್: 2002 ರ ಗೋಧ್ರಾ ರೈಲು ದುರಂತ ಘಟನೆಯನ್ನು ಆಧರಿಸಿದ 'ದಿ ಸಬರಮತಿ ರಿಪೋರ್ಟ್' ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಮಂಗಳವಾರ ಘೋಷಿಸಿದೆ.

ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.

ಧೀರಜ್ ಸರ್ನಾ ನಿರ್ದೇಶನದ ಈ ಚಿತ್ರವು ಗುಜರಾತ್‌ನಲ್ಲಿ ವ್ಯಾಪಕ ಕೋಮು ಗಲಭೆಗೆ ಕಾರಣವಾದ ಗೋಧ್ರಾ ರೈಲು ದುರಂತದ ಘಟನೆಗಳನ್ನು ಒಳಗೊಂಡಿದೆ.

"ದಿ ಸಬರಮತಿ ರಿಪೋರ್ಟ್' ತುಂಬಾ ಒಳ್ಳೆಯ ಸಿನಿಮಾ. ನಾನೇ ಸಿನಿಮಾ ನೋಡಲು ಹೋಗುತ್ತೇನೆ. ನನ್ನ ಸಚಿವರು, ಶಾಸಕರು, ಸಂಸದರಿಗೂ ಈ ಸಿನಿಮಾ ನೋಡುವಂತೆ ಹೇಳಿದ್ದೆ. ರಾಜ್ಯದಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತೇವೆ. ಜನರು ಇದನ್ನು ವೀಕ್ಷಿಸಬಹುದು ಎಂದು ಯಾದವ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.

ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಸುಳ್ಳಿನ ನಿರೂಪಣೆ ಕ್ಷಣಿಕ ಕಾಲಕ್ಕೆ ಮಾತ್ರ ಇರುತ್ತದೆ. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries