HEALTH TIPS

ರಸ್ತೆ ಅಪಘಾತಗಳಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಏರಿಕೆ: ಸಚಿವ ನಿತಿನ್ ಗಡ್ಕರಿ

Top Post Ad

Click to join Samarasasudhi Official Whatsapp Group

Qries

 ರಾಯಪುರ: ದೇಶದಲ್ಲಿ ರಸ್ತೆ ಅಪಘಾತಗಳಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಇಂಡಿಯನ್‌ ರೋಡ್‌ ಕಾಂಗ್ರೆಸ್‌ನ 83ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು ಈ ಸಾವಿನ ಸಂಖ್ಯೆಯನ್ನು ಗಣನೀಯವಾಗಿ ತಗ್ಗಿಸಬೇಕು ಎಂದು ಹೇಳಿದರು.

ಪ್ರತಿ ವರ್ಷ 1.50 ಲಕ್ಷ ಜನರು ರಸ್ತೆ ಅಪಘಾತಗಳಿಂದ ಮೃತಪಡುತ್ತಿದ್ದಾರೆ. ಪ್ರಸ್ತುತ ಈ ಸಂಖ್ಯೆ 1.68 ಲಕ್ಷಕ್ಕೆ ಏರಿಕೆಯಾಗಿದೆ ಎಂದರು.

ಸುರಕ್ಷತೆ ಸಂಬಂಧ ರಸ್ತೆ ಮತ್ತು ಆಟೊಮೊಬೈಲ್‌ ಎಂಜಿನಿಯರ್‌ಗಳ ನ್ಯೂನತೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆದರೆ, ವಿಸ್ತೃತ ಯೋಜನಾ ವರದಿ (ಡಿಪಿಎಆರ್‌) ತಯಾರಿಕೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರಿ ಎಂಜಿನಿಯರ್‌ಗಳು ಹುದ್ದೆ ತೊರೆದು ಹೆದ್ದಾರಿಗಳ ನಿರ್ಮಾಣ ಸಂಬಂಧ ಉತ್ತಮ ಡಿಪಿಆರ್‌ ತಯಾರಿಸುವ ಕಂಪನಿ ತೆರೆದರೆ ಅದಕ್ಕೆ ಅಂತಹವರಿಗೆ ಆದ್ಯತೆಯ ಮೇರೆಗೆ ಕೆಲಸ ನೀಡಲಾಗುವುದು ಎಂದರು.

ಆಟೊಮೊಬೈಲ್‌ ಎಂಜಿನಿಯರಿಂಗ್‌ನಲ್ಲಿ ಹಲವು ನಿಯಮ ರೂಪಿಸಲಾಗಿದೆ. ಹೆದ್ದಾರಿಗಳ ನಿರ್ಮಾಣದ ವೇಳೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಎಂಜಿನಿಯರ್‌ಗಳ ಜವಾಬ್ದಾರಿ. ಮುಂದಿನ ದಿನಗಳಲ್ಲಿ ಒಬ್ಬ ‍ಪ್ರಯಾಣಿಕ ಮೃತಪಟ್ಟರೂ ನನಗೆ ಅಪರಾಧಿ ಪ್ರಜ್ಞೆ ಕಾಡುತ್ತದೆ ಎಂದರು.

ರಸ್ತೆ ಅಪಘಾತಗಳ ತಡೆಗೆ ಸರ್ಕಾರ ಗಂಭೀರ ‍ಪ್ರಯತ್ನ ಮಾಡುತ್ತಿದೆ. ಮೃತಪಡುವವರ ಪೈಕಿ ಶೇ 60ರಷ್ಟು ಮಂದಿಯ ವಯಸ್ಸು 18ರಿಂದ 40 ವರ್ಷ ಇದೆ ಎಂದು ಹೇಳಿದರು.

ಕೂಲಂಕಷ ಪರಿಶೀಲನೆ ನಡೆಸದೆ ಹೆದ್ದಾರಿ ಯೋಜನೆಗಳ ಡಿಪಿಆರ್‌ಗೆ ಅನುಮೋದನೆ ನೀಡುವುದಿಲ್ಲ ಎಂದು ತಿಳಿಸಿದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries