HEALTH TIPS

ಮುಂಬೈ ದಾಳಿ ಹುತಾತ್ಮರಿಗೆ ಗೌರವ ಸಮರ್ಪಣೆ

Top Post Ad

Click to join Samarasasudhi Official Whatsapp Group

Qries

ಮುಂಬೈ: 2008ರಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪೊಲೀಸರಿಗೆ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್‌ ಹಾಗೂ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮಂಗಳವಾರ ಗೌರವ ಸಮರ್ಪಿಸಿದರು.

ಪೊಲೀಸ್‌ ಆಯಕ್ತರ ಕಚೇರಿ ಆವರಣದಲ್ಲಿರುವ 'ಹುತಾತ್ಮರ ಸ್ಮಾರಕ'ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್‌ ಹಾಗೂ ಅಜಿತ್‌ ಪವಾರ್‌ ಸೇರಿ ಹಿರಿಯ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ದಾಳಿಯಲ್ಲಿ ಹುತಾತ್ಮರಾಗಿದ್ದ ಪೊಲೀಸರ ಕುಟುಂಬ ಸದಸ್ಯರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ಸಮರ್ಪಿಸಿದರು.

ಮುಂಬೈ ದಾಳಿಯಲ್ಲಿ ಹುತಾತ್ಮರಾದ ಪೊಲೀಸರಿಗೆ ಅವರ ಸಂಬಂಧಿಯೊಬ್ಬರು ಮಂಗಳವಾರ ಗೌರವ ನಮನ ಸಲ್ಲಿಸಿದರು -ಪಿಟಿಐ ಚಿತ್ರ

ಪಾಕಿಸ್ತಾನ ಮೂಲದ ಲಷ್ಕರ್‌-ಎ-ತಯಬಾ (ಎಲ್‌ಇಟಿ) ಸಂಘಟನೆಯ 10 ಉಗ್ರರು 2008ರ ನವೆಂಬರ್‌ 26ರಂದು, ಮುಂಬೈನ ವಿವಿಧೆಡೆ ಏಕಕಾಲದಲ್ಲಿ ದಾಳಿ ಮಾಡಿದ್ದರು. ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು. 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries