HEALTH TIPS

ಅನಿಲ್ ದೇಶಮುಖ್ ಮೇಲೆ ದಾಳಿ-ಹಲ್ಲೆ; ನಾಲ್ವರು ಅಪರಿಚಿತರ ಮೇಲೆ ಕೊಲೆ ಯತ್ನ ಪ್ರಕರಣ

Top Post Ad

Click to join Samarasasudhi Official Whatsapp Group

Qries

 ನಾಗ್ಪುರ: ನಾಗ್ಪುರದಲ್ಲಿ ಎನ್‌ಸಿಪಿ (ಎಸ್‌ಪಿ) ನಾಯಕ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಅಪರಿಚಿತ ವ್ಯಕ್ತಿಗಳ ಮೇಲೆ ಕೊಲೆ ಯತ್ನದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನಿಲ್ ದೇಶಮುಖ್ ಅವರು ಸಂಚರಿಸುತ್ತಿದ್ದ ಕಾರಿನ ಮೇಲೆ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇಶಮುಖ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನ ಈ ಘಟನೆ ನಡೆದಿದೆ. ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಎನ್‌ಸಿಪಿ (ಎಸ್‌ಪಿ) ಒತ್ತಾಯಿಸಿದೆ.


ನಾಗ್ಪುರ ಜಿಲ್ಲೆಯ ನಾರ್ಖೆಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ದೇಶಮುಖ್ ಅವರು ಕಟೋಲ್‌ಗೆ ಹಿಂತಿರುಗುತ್ತಿದ್ದರು. ಈ ವೇಳೆ ಜಲಾಲ್‌ಖೇಡಾ ರಸ್ತೆಯ ಬೆಲ್‌ಪತ್ರ್ ಬಳಿ ದುಷ್ಕರ್ಮಿಗಳು ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ.

'ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಭೇಟಿ ನೀಡಿ, ಸಾಕ್ಷ್ಯಗಳನ್ನು ಸಂಗ್ರಹಿಸಿದೆ' ಎಂದು ನಾಗ್ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರ್ಷ್ ಪೊದ್ದಾರ್ ತಿಳಿಸಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries