HEALTH TIPS

ಏಕರೂಪ ನಾಗರಿಕ ಸಂಹಿತೆ: ಮಸೂದೆಗೆ ಉತ್ತರಾಖಂಡ ಸಂಪುಟ ಅನುಮೋದನೆ

Top Post Ad

Click to join Samarasasudhi Official Whatsapp Group

Qries

ಡೆಹ್ರಾಡೂನ್‌: ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ನೇತೃತ್ವದ ಉತ್ತರಾಖಂಡ ಸರ್ಕಾರವು ಇಂದು (ಸೋಮವಾರ) ನಡೆದ ಸಂಪುಟ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ)ಪಳ ಅನುಮೋದನೆ ನೀಡಿದೆ. ಇದರೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ಯುಸಿಸಿಯನ್ನು ಜಾರಿಗೊಳಿಸಿದಂತಾಗಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧಾಮಿ, '2022ರಲ್ಲಿ ನಮ್ಮ ಸರ್ಕಾರ ರಚನೆಯಾದ ಕೂಡಲೇ ಯುಸಿಸಿ ಮಸೂದೆಯನ್ನು ಜಾರಿಗೆ ತರುತ್ತೇವೆ ಎಂದು ಜನತೆಗೆ ಭರವಸೆ ನೀಡಿದ್ದೆವು. ಅದರಂತೆ ಈಗ ಯುಸಿಸಿ ಮಸೂದೆಯನ್ನು ಜಾರಿಗೊಳಿಸಿದ್ದೇವೆ. ಯುಸಿಸಿ ಜಾರಿಗೆ ಸಂಬಂಧಿಸಿ ಕರಡು ಸಮಿತಿ ವರದಿಯನ್ನು ಮಂಡಿಸಲಾಗಿದ್ದು, ಸಭಾಧ್ಯಕ್ಷರು ಮಸೂದೆಯನ್ನು ಅಂಗೀಕರಿಸಿದ್ದಾರೆ' ಎಂದು ಹೇಳಿದ್ದಾರೆ.

'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವವನ್ನು 2025ರಲ್ಲಿ ಆಚರಿಸುತ್ತಿದ್ದೇವೆ. ಇದು ದೊಡ್ಡ ಸಾಧನೆಗಳ ವರ್ಷವಾಗಿರಲಿದೆ. ಯುಸಿಸಿಯನ್ನು ಇದೇ (ಜನವರಿ) ತಿಂಗಳಿನಲ್ಲಿ ಜಾರಿಗೆ ತರುತ್ತೇವೆ' ಎಂದು ಧಾಮಿ ತಿಳಿಸಿದ್ದಾರೆ.

'ಸಂಹಿತೆಗೆ ಇರುವ ಕಾನೂನು ನಿಬಂಧನೆಗಳು ಮತ್ತು ರಾಜ್ಯದಲ್ಲಿ ಅದನ್ನು ಹೇಗೆ ಅನುಷ್ಠಾನಗೊಳಿಸಬೇಕು ಎಂಬ ಕುರಿತು ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಸಂಹಿತೆ ಜಾರಿಗೊಳಿಸುವ ದಿನಾಂಕವನ್ನು ಶೀಘ್ರವೇ ಪ್ರಕಟಿಸುತ್ತೇವೆ' ಎಂದು ಅವರು ಮಾಹಿತಿ ನೀಡಿದ್ದಾರೆ. 

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries